SHIVAMOGGA LIVE NEWS | 18 NOVEMBER 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA | ‘ಪ್ಯಾನ್ ಕಾರ್ಡ್ ಮಾಹಿತಿ ಅಪ್ ಡೇಟ್ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಸಸ್ಪೆಂಡ್ ಆಗಲಿದೆ.’ ಹೀಗೆಂದು ಬಂದ ಎಸ್.ಎಂ.ಎಸ್ ನಂಬಿ ಕೃಷಿಕರೊಬ್ಬರು ವಂಚನೆಗೊಳಗಾಗಿದ್ದಾರೆ. (sms fraud)

ಶಿವಮೊಗ್ಗ ಜಿಲ್ಲೆಯ ಕೃಷಿಕರೊಬ್ಬರ (ಹೆಸರು ಗೌಪ್ಯ) ಮೊಬೈಲ್ ಫೋನ್ ಗೆ ಹೆಚ್.ಡಿ.ಎಫ್.ಸಿ ಬ್ಯಾಂಕ್ ಹೆಸರಿನಲ್ಲಿ ಮೆಸೇಜ್ ಬಂದಿದೆ. ‘ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡದಿದ್ದರೆ ಹೆಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿರುವ ನಿಮ್ಮ ಖಾತೆ ಸಸ್ಪೆಂಡ್ ಆಗಲಿದೆ. ಈ ಕೂಡಲೆ ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ’ ಎಂದು ಬರೆಯಲಾಗಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ
ಬ್ಯಾಂಕಿನಿಂದಲೆ ಮೆಸೇಜ್ ಬಂದಿರಬೇಕು ಎಂದು ನಂಬಿದ ಕೃಷಿಕ, ಲಿಂಕ್ ಕ್ಲಿಕ್ ಮಾಡಿದ್ದಾರೆ. ತಕ್ಷಣವೆ ವೆಬ್ ಸೈಟ್ ಒಂದು ತೆರೆದುಕೊಂಡಿದ್ದು, ಅದರಲ್ಲಿ ಬ್ಯಾಂಕ್ ಮಾಹಿತಿ ಕೇಳಲಾಗಿತ್ತು. ಅವುಗಳನ್ನು ದಾಖಲು ಮಾಡುತ್ತಿದ್ದಂತೆ ಒಟಿಪಿ ಬಂದಿದೆ. ಒ.ಟಿ.ಪಿ ಸಂಖ್ಯೆ ಎಂಟ್ರಿ ಮಾಡುತ್ತಿದ್ದಂತೆ, ಎರಡು ಭಾರಿ ಹಣ ಕಡಿತವಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?
ಮೊದಲ ಭಾರಿ 24,500 ರೂ, ಎರಡನೇ ಭಾರಿ 34 ಸಾವಿರ ರೂ. ಸೇರಿ ಒಟ್ಟು 58,500 ರೂ. ಹಣ ಕಡಿತವಾಗಿದೆ. ಆ ಬಳಿಕ ಕೃಷಿಕ ತನ್ನ ಖಾತೆ ಇರುವ ಬ್ಯಾಂಕಿಗೆ ಕರೆ ಮಾಡಿದ್ದಾರೆ. ಆಗ ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
(sms fraud)
ಎಚ್ಚರ ತಪ್ಪಿದರೆ ಹಣ ಮಾಯ
ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೆ ಅಪ್ ಡೇಟ್ ಗಾಗಿ ಬ್ಯಾಂಕುಗಳು ಗ್ರಾಹಕರಿಗೆ ಲಿಂಕ್ ಇರುವ ಮೆಸೇಜ್ ಕಳುಹಿಸುವುದಿಲ್ಲ. ‘ಎಟಿಎಂ ಸಸ್ಪೆಂಡ್ ಆಗಲಿದೆ’, ‘ಖಾತೆ ಸಸ್ಪೆಂಡ್ ಮಾಡಲಾಗುತ್ತದೆ’ ಎಂಬ ಮೆಸೇಜುಗಳು ಬಂದಾಗ, ಗ್ರಾಹಕರು ಸಂಬಂಧಿಸಿದ ಬ್ರಾಂಚ್ ಗಳಿಗೆ ತೆರಳಿ ಮಾಹಿತಿ ಪಡೆಯಬೇಕಿದೆ. ಯಾವುದೆ ಅಪ್ ಡೇಟ್ ಇದ್ದರು ಬ್ಯಾಂಕಿನಲ್ಲಿಯೆ ಮಾಡುವುದರಿಂದ ಹಣ ಸುರಕ್ಷಿತವಾಗಿ ಉಳಿಯಲಿದೆ.

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






