ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |12 DECEMBER 2022
ಶಿವಮೊಗ್ಗ : ಶರಾವತಿ ಸಂತ್ರಸ್ಥರ ಜಮೀನು ಸರ್ವೆ (joint survey) ಕಾರ್ಯ ಬಿರುಸಾಗಿ ನಡೆಯುತ್ತಿದೆ. ಡಿ.20ರ ಒಳಗೆ ಸರ್ವೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಮುಖ್ಯಮಂತ್ರಿ ಅವರು ಡಿ.20ರ ಒಳಗೆ ಸರ್ವೆ ಪೂರ್ಣಗೊಳಿಸುವಂತೆ ಡೆಡ್ ಲೈನ್ ನೀಡಿದ್ದಾರೆ. ಅಷ್ಟರ ಒಳಗೆ ಸರ್ವೆ (joint survey) ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – ಮಲೆನಾಡಲ್ಲಿ ಮುಂದುವರೆಯಲಿದೆ ಮಳೆ, ಶಿವಮೊಗ್ಗದ ರೈತರು, ವ್ಯಾಪಾರಿಗಳ ಬದುಕಿಗೆ ಬರೆ
ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸುತ್ತಿದೆ. ಕೆಲವು ಕಡೆಗೆ ತಾವು ಭೇಟಿ ನೀಡಿ ಸರ್ವೆ ಕಾರ್ಯದ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಸರ್ವೆ ನಂಬರ್ ಮತ್ತು ಗ್ರಾಮವಾರು ಸರ್ವೆಯಾಗುತ್ತಿದೆ. ಅಲ್ಲಲ್ಲಿ ತಾವು ತೆರಳಿ ಸರ್ವೆ ಕಾರ್ಯ ಪರಿವೀಕ್ಷಣೆ ಮಾಡಿರುವುದಾಗಿ ತಿಳಿಸಿದರು.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



