ಬಸ್ ನಿಲ್ದಾಣದಲ್ಲಿ ಕೈ ಕೈ ಮಿಲಾಯಿಸಿದ ಪ್ರಯಾಣಿಕರು, ದೂರು, ಪ್ರತಿ ದೂರು ದಾಖಲು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 DECEMBER 2022

ಶಿವಮೊಗ್ಗ : ಬಸ್ ಹತ್ತುವ ಭರದಲ್ಲಿ ವ್ಯಕ್ತಿಯೊಬ್ಬರ ಕಾಲಿಗೆ ಸೂಟ್ ಕೇಸ್ (suit case) ತಾಗಿದೆ. ಇದೆ ವಿಚಾರವಾಗಿ ಎರಡು ಕಡೆಯವರು ಕೈ ಕೈ ಮಿಲಾಯಿಸಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು, ಪ್ರತಿದೂರು ದಾಖಲಾಗಿದೆ.

Shimoga Nanjappa Hospital

ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ತಾಹೀರ್ ಪರ್ವೀನ್ ಮತ್ತು ಅವರ ಮಗ ದಾವಣಗೆರೆ ಬಸ್ ಹತ್ತಲು ತೆರಳುತ್ತಿದ್ದರು. ತಾಹೀರ್ ಪರ್ವಿನ್ (60) ಅವರ ಮಗ ಹಿಡಿದುಕೊಂಡಿದ್ದ ಸೂಟ್ ಕೇಸ್ (suit case) ಕೇಶವಮೂರ್ತಿ (70) ಎಂಬುವವರ ಕಾಲಿಗೆ ತಾಗಿದೆ. ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸಿದ್ದಾರೆ.

(suit case)

ಕೇಶವಮೂರ್ತಿ ಆರೋಪವೇನು

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಶವಮೂರ್ತಿ ಅವರು ದೂರು ನೀಡಿದ್ದಾರೆ. ‘ಸೂಟ್ ಕೇಸ್ ಕಾಲಿಗೆ ತಾಗಿತು. ಸರಿಯಾಗಿ ನೋಡಿಕೊಂಡು ಬಾರಯ್ಯ ಎಂದಿದ್ದಕ್ಕೆ ಆ ವ್ಯಕ್ತಿ ಅವಾಚ್ಯವಾಗಿ ಬೈದು, ಹೊಡೆಯಲು ಆರಂಭಿಸಿದ. ಇದೆ ಹೊತ್ತಿಗೆ ಇನ್ನೂ ಮೂವರು ಯುವಕರು ಆತನ ಜೊತೆಯಾಗಿ ತನ್ನ ಮೇಲೆ ಹಲ್ಲೆ ಮಾಡಿ, ಬಟ್ಟೆ ಹರಿದಿದ್ದಾರೆ. ತನ್ನ ಬಳಿ ಇದ್ದ 3500 ರೂ. ನಗದು, 8 ಗ್ರಾಂ ತೂಕದ ಬಂಗಾರದ ಚೈನ್ ಕಿತ್ತುಕೊಂಡು ಹೋಗಿದ್ದಾರೆ. ತಾಹೀರ್ ಪರ್ವಿನ್ ಎಂಬ ಮಹಿಳೆ ಯುವಕರಿಗೆ ಕುಮ್ಮಕ್ಕು ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ತಾಹೀರ್ ಪರ್ವೀನ್ ದೂರಿನಲ್ಲಿ ಏನಿದೆ?

ಘಟನೆ ಸಂಬಂಧ ತಾಹೀರ್ ಪರ್ವೀನ್ ಕೂಡ ದೂರು ನೀಡಿದ್ದಾರೆ. ‘ಸೂಟ್ ಕೇಸ್ ತಾಗಿದ್ದಕ್ಕೆ ಆ ವ್ಯಕ್ತಿ ಅವಾಚ್ಯವಾಗಿ ಬೈದಿದ್ದಾರೆ. ಗೊತ್ತಾಗಿಲ್ಲ ಎಂದು ತಾನು ಮತ್ತು ಮಗ ಹೇಳಿದೆವು. ಇದಕ್ಕೆ ಸುಮ್ಮನಾಗದ ಆ ವ್ಯಕ್ತಿ ಅವಾಚ್ಯವಾಗಿ ನಿಂದಿಸಿ, ತನ್ನ ಮಗನಿಗೆ ಹೊಡೆದರು. ಬಿಡಿಸಲು ಹೋದಾಗ ತನ್ನನ್ನು ಎಳೆದಾಡಿ, ಬಟ್ಟೆ ಹರಿದಿದ್ದಾರೆ. ಈ ಹೊತ್ತಿಗೆ ಸಾರ್ವಜನಿಕರು ಜಗಳ ಬಿಡಿಸಿದ್ದಾರೆ. ಆಗ ಆ ವ್ಯಕ್ತಿಯ ಬಟ್ಟೆ ಹರಿದಿದೆ’ ಎಂದು ದೂರಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ 20 ಚೆಕ್ ಪೋಸ್ಟ್, ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, 46 ಜನರ ವಿರುದ್ಧ ಕೇಸ್

ಘಟನೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment