SHIVAMOGGA LIVE NEWS | 18 DECEMBER 2022
ಶಿವಮೊಗ್ಗ : ಡಿವೈಎಸ್ಪಿ ಬಿ.ಬಾಲರಾಜ್ ಅವರು ಕೇಂದ್ರ ಗೃಹ ಮಂತ್ರಿ ಪದಕಕ್ಕೆ (medal) ಭಾಜನರಾಗಿದ್ದಾರೆ. ಜೀವಮಾನ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಹಲವು ವಿಭಾಗದಲ್ಲಿ ಗೃಹ ಮಂತ್ರಿ ಪದಕ ನೀಡಲಿದ್ದು ಬಾಲರಾಜು ಅವರು 2018ನೇ ಸಾಲಿನ ಕೇಂದ್ರದ ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ ಪದಕ ಪಡೆದಿದ್ದಾರೆ.
ತಂತ್ರಜ್ಞಾನ ಮತ್ತು ವೈಜ್ಞಾನಿಕ ಆಧಾರದ ಮೇಲೆ ತನಿಖೆ ನಡೆಸುವುದು ಸೇರಿದಂತೆ ಎಷ್ಟು ಮಂದಿಗೆ ಶಿಕ್ಷೆ ಆಗಿದೆ ಎಂಬುದನ್ನು ಪರಿಗಣಿಸಿ ಪದಕಕ್ಕೆ (medal) ಆಯ್ಕೆ ಮಾಡಲಿದ್ದು ಜನವರಿ 5ರಂದು ಬೆಂಗಳೂರಿನಲ್ಲಿ ಪದಕ ವಿತರಣೆ ಸಮಾರಂಭ ನಡೆಯಲಿದೆ.
![]() |
ಇದನ್ನೂ ಓದಿ – ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?
2018ರಲ್ಲಿ ಬೆಂಗಳೂರಿನಲ್ಲಿ ನೇಪಾಳ ಮೂಲದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಬಾಲರಾಜ್ ಅವರು 8 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ 8 ಮಂದಿಗೂ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವನ್ನೂ ಪರಿಗಣಿಸಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200