ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 DECEMBER 2022
[su_highlight background=”#cd0003″ color=”#ffffff”]ಸುದ್ದಿಯ ಹಿನ್ನೆಲೆ[/su_highlight]
[su_note note_color=”#fff0c8″ text_color=”#000000″ radius=”0″]ಶರಾವತಿ ಯೋಜನೆ ಸಂತ್ರಸ್ಥರಿಗೆ (sharavathi issue) ಈತನಕ ಭೂಮಿ ಹಕ್ಕು ನೀಡಿಲ್ಲ. ಶರಾವತಿ ಸಂತ್ರಸ್ಥರು ದಶಕಗಳಿಂದ ವಾಸವಾಗಿರವ ಜಮೀನನ್ನು ಡಿನೋಟಿಫೈ ಮಾಡಲಾಗಿದೆ. ಇದು ಸಂತ್ರಸ್ಥರಲ್ಲಿ ಆತಂಕ ಮೂಡಿಸಿದೆ. ನೆಲೆ ಕಳೆದುಕೊಳ್ಳುವ ಭೀತಿಯಲ್ಲಿ ಸಂತ್ರಸ್ಥರು ದಿಕ್ಕು ತೋಚದಂತಾಗಿದ್ದಾರೆ. ಇದೆ ಕಾರಣಕ್ಕೆ ಹೋರಾಟ, ಚಳವಳಿಗಳನ್ನ ನಡೆಸುತ್ತಿದ್ದಾರೆ.[/su_note]
[su_divider text=”www.shivamoggalive.com” divider_color=”#000000″ link_color=”#000000″]
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು.
ಸಂಸದ ರಾಘವೇಂದ್ರ ಹೇಳಿದ್ದೇನು?
ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಅವಕಾಶ ನೀಡಲಾಗಿತ್ತು. ಆದರೆ 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಮಲೆನಾಡು ಪ್ರಾಂತ್ಯವಾದ ಶಿವಮೊಗ್ಗ ಜಿಲ್ಲೆಯ ಈ ಭಾಗದ ಪ್ರಮುಖ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.

[su_highlight background=”#cd0003″ color=”#ffffff”]ಯಾವುದೆ ಸವಲತ್ತು ಸಿಗುತ್ತಿಲ್ಲ[/su_highlight]
[su_note note_color=”#fff0c8″ text_color=”#000000″ radius=”0″]ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯಿದೆ-1980 ಕ್ಕಿಂತ ಮೊದಲು, ಅದನ್ನು ಮಾಡಬೇಕಾಗಿತ್ತು ಮತ್ತು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷದಿಂದ ಅದು ಆಗಲಿಲ್ಲ. ಹಾಗಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ ಎಂದರು.[/su_note]
ಇದನ್ನೂ ಓದಿ – ಶರಾವತಿ ಸಂತ್ರಸ್ಥರ ಜಮೀನು ಸರ್ವೆ, ಸಮೀಪಕ್ಕೆ ಬಂತು ಡೆಡ್ ಲೈನ್, ಡಿಸಿ ಹೇಳಿದ್ದೇನು?
ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ. ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸದನಕ್ಕೆ ತಿಳಿಸಿದರು.
ಇದನ್ನೂ ಓದಿ – ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ
[su_highlight background=”#cd0003″ color=”#ffffff”]ತಕ್ಷಣ ಡಿ-ನೋಟಿಫೈಗೆ ಕ್ರಮ ಕೈಗೊಳ್ಳಿ[/su_highlight]
[su_note note_color=”#fff0c8″ text_color=”#000000″ radius=”0″]ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪರಿಸರ ಮತ್ತು ಅರಣ್ಯ ಸಚಿವರು ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿ ಮಂಜೂರು ಮಾಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಬೇಕು. ವಿಳಂಬ ಮಾಡದೆ ತಕ್ಷಣವೇ ಡಿ-ನೋಟಿಫಿಕೇಶನ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ರಾಘವೇಂದ್ರ ಮನವಿ ಮಾಡಿದ್ದಾರೆ. [/su_note]
[su_label type=”important”]VIDEO[/su_label]

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















