SHIVAMOGGA LIVE NEWS | 30 DECEMBER 2022
ಆನಂದಪುರ : ಬೈಕ್ ಸ್ಕಿಡ್ (skid) ಆಗಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾರೆ. ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ.
ಭೈರಾಪುರದ ದಾನಪ್ಪ (41) ಮೃತ ದುರ್ದೈವಿ. ಬುಧವಾರ ರಾತ್ರಿ ಶಿಕಾರಿಪುರ ಸಂಪರ್ಕದ ಕೆಶಿಪ್ ಹೆದ್ದಾರಿಯಲ್ಲಿ ಗೌತಮಪುರದ ಪೀರನಕಣಿವೆ ಬಳಿ ಬೈಕ್ ಸ್ಕಿಡ್ (skid) ಆಗಿ ದಾನಪ್ಪ ಬಿದ್ದು ಗಾಯಗೊಂಡಿದ್ದರು.
ಇದನ್ನೂ ಓದಿ – ಬುಕ್ ಮಾಡಿದ ಸೀಟ್ ಬಿಟ್ಟು ಮತ್ತೊಂದು ಸೀಟ್ ಕೇಳಿದ ಪ್ರಯಾಣಿಕ, ಕೊಡದಿದ್ದಕ್ಕೆ ರಂಪಾಟ, ಹಲ್ಲೆ
ದಾನಪ್ಪ ಅನಂದಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200