ನಗದು, ಬೆಳ್ಳಿ ವಿಗ್ರಹದ ಜೊತೆಗೆ ಸಾಕ್ಷಿ ನಾಶಕ್ಕೆ ಸಿಸಿಟಿವಿ ಡಿವಿಆರ್ ಕದ್ದೊಯ್ದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 DECEMBER 2022

ಹೊಸನಗರ  : ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ (theft at society) ಮುರಿದು ನಗದು, ದೇವರ ಬೆಳ್ಳಿ ವಿಗ್ರಹ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ.

Shimoga Nanjappa Hospital

ಹೊಸನಗರ ತಾಲೂಕು ನಗರದ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲು ಸಿಬ್ಬಂದಿ ಬಂದಾಗ ಕಳ್ಳತನ ಬೆಳಕಿಗೆ (theft at society) ಬಂದಿದೆ.

ಇದನ್ನೂ ಓದಿ – ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು

ಡಿ.28ರಂದು ಸಂಜೆ ಸಂಘದ ಸೇಲ್ಸ್ ಮನ್ ಅವರು ಕಚೇರಿಯ ಬೀಗ ಹಾಕಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಕೀ ತಲುಪಿಸಿದ್ದರು. ಮರುದಿನ ಬೆಳಗ್ಗೆ ಸಂಘದ ಸ್ವಚ್ಛತೆ ಮಾಡುವ ಮಹಿಳೆ ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೂಡಲೆ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.

ಸಂಘದ ಕಚೇರಿಯಲ್ಲಿದ್ದ 25 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಬೆಳ್ಳಿಯ ಗಣಪತಿ ಮೂರ್ತಿ, 20 ಸಾವಿರ ರೂ. ಮೌಲ್ಯದ ಸಿಸಿಟಿವಿ ಕ್ಯಾಮರಾ ಡಿವಿಆರ್ ಕಳ್ಳತನ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga nanjappa hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2022

Leave a Comment