ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 DECEMBER 2022
ಹೊಸನಗರ : ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ (theft at society) ಮುರಿದು ನಗದು, ದೇವರ ಬೆಳ್ಳಿ ವಿಗ್ರಹ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ.

ಹೊಸನಗರ ತಾಲೂಕು ನಗರದ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲು ಸಿಬ್ಬಂದಿ ಬಂದಾಗ ಕಳ್ಳತನ ಬೆಳಕಿಗೆ (theft at society) ಬಂದಿದೆ.
ಇದನ್ನೂ ಓದಿ – ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು
ಡಿ.28ರಂದು ಸಂಜೆ ಸಂಘದ ಸೇಲ್ಸ್ ಮನ್ ಅವರು ಕಚೇರಿಯ ಬೀಗ ಹಾಕಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಕೀ ತಲುಪಿಸಿದ್ದರು. ಮರುದಿನ ಬೆಳಗ್ಗೆ ಸಂಘದ ಸ್ವಚ್ಛತೆ ಮಾಡುವ ಮಹಿಳೆ ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೂಡಲೆ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.
ಸಂಘದ ಕಚೇರಿಯಲ್ಲಿದ್ದ 25 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಬೆಳ್ಳಿಯ ಗಣಪತಿ ಮೂರ್ತಿ, 20 ಸಾವಿರ ರೂ. ಮೌಲ್ಯದ ಸಿಸಿಟಿವಿ ಕ್ಯಾಮರಾ ಡಿವಿಆರ್ ಕಳ್ಳತನ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP



