ಶಿಕಾರಿಪುರದಲ್ಲಿ ಮೆಸ್ಕಾಂ, ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JANUARY 2023

ಶಿಕಾರಿಪುರ : ಮೆಸ್ಕಾಂ ಸಂಸ್ಥೆಯ ರೈತ ವಿರೋಧಿ ನಡೆ, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನಾ (congress) ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ (congress) ಅಧ್ಯಕ್ಷ ಮಹೇಶ್ ಹುಲ್ಮಾರ್ ಅವರು, ‘ಬಿಜೆಪಿ ಸರ್ಕಾರ ರೈತರು, ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮೆಸ್ಕಾಂ ಅಧಿಕಾರಿಗಳು ರೈತರನ್ನು ಉಪೇಕ್ಷಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಂಡರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ. ಚುನಾವಣೆ ದೃಷ್ಟಿಯಿಂದ ಕಾಮಗಾರಿಗಳು, ಮೀಸಲಾತಿ ಜಾರಿಗೊಳಿಸದೆ ಶಾಶ್ವತವಾಗಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದರು.

ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಮಾತನಾಡಿ, ‘ಟಿಸಿಗಳು ಸುಟ್ಟು ಹೋದರೆ 24 ಗಂಟೆಯಲ್ಲಿ ಹೊಸ ಟಿಸಿ ಹಾಕುತ್ತೇವೆ ಎಂದು ಇಂಧನ ಸಚಿವರು ಹೇಳಿದ್ದರು. ಆದರೆ ಸುಟ್ಟು ಹೋಗಿ ತಿಂಗಳುಗಳು ಕಳೆದರೂ ಟಿಸಿಗಳ ಬದಲಾವಣೆ ಮಾಡಿಲ್ಲ. ಲಂಚ ಕೊಡದೆ ಯಾವುದೆ ಕೆಲಸವು ಆಗುತ್ತಿಲ್ಲ. ಬಿಜೆಪಿ ಸರ್ಕಾರ ರೈತರು, ಅಲ್ಪಸಂಖ್ಯಾತರು, ಹಿಂದುಳಿದವರ ಬಗ್ಗೆ ಕ್ಯಾರೆ ಅನ್ನುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಿಸುವಂತಿಲ್ಲ, ಶಿವಮೊಗ್ಗದಲ್ಲಿ 117 ಬಸ್ ಸ್ಟಾಪ್ ಗುರುತಿಸಿ ಅಧಿಸೂಚನೆ ಪ್ರಕಟ

ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪ ಗೌಡ, ಕಾಡಾ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಪುರಸಭೆ ಸದಸ್ಯರಾದ ನಾಗರಾಜ ಗೌಡ, ಉಳ್ಳಿ ದರ್ಶನ್, ರೋಷನ್, ಉಮೇಶ್ ಮಾರವಳ್ಳಿ, NSUI ಅಧ್ಯಕ್ಷ ಹುಲ್ಮಾರ್ ಶಿವು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment