ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2023
ಶಿಕಾರಿಪುರ : ಸ್ನೇಹಿತರೊಂದಿಗೆ ಅಂಬ್ಲಿಗೊಳ್ಳ ಜಲಾಶಯಕ್ಕೆ (ambligola dam) ತೆರಳಿದ್ದ ವ್ಯಕ್ತಿಯೊಬ್ಬರು ಡ್ಯಾಂನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ನಿವಾಸಿ ಜಗದೀಶ್ (37) ನಾಪತ್ತೆ ಆದವರು. ಜಗದೀಶ್ ಅವರು ತಮ್ಮ ಸ್ನೇಹಿತರೊಂದಿಗೆ ಭಾನುವಾರ ಸಂಜೆ ಅಂಬ್ಲಿಗೊಳ್ಳ ಜಲಾಶಯಕ್ಕೆ ಬಂದಿದ್ದರು. ತಂಡದಲ್ಲಿದ್ದವರು ಅಂಬ್ಲಿಗೊಳ್ಳ ಜಲಾಶಯದಲ್ಲಿ (ambligola dam) ಈಜಲು ಮುಂದಾಗಿದ್ದರು.

ಜಗದೀಶ್ ಅವರು ಜಲಾಶಯದಲ್ಲಿ ಸ್ನಾನಕ್ಕೆ ಮುಂದಾಗಿದ್ದರು. ಈ ವೇಳೆ ಅವರು ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜಗದೀಶ್ ಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ – ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ
ಅಗ್ನಿಶಾಮಕ ದಳ ಸಿಬ್ಬಂದಿ, ಮುಳುಗು ತಜ್ಞರು ಭಾನುವಾರ ರಾತ್ರಿಯವರೆಗೆ ಶೋಧ ಕಾರ್ಯ ನಡೆಸಿದ್ದರು. ಹುಡುಕಾಟದ ವೀಕ್ಷಣೆಗೆ ದೊಡ್ಡ ಸಂಖ್ಯೆಯ ಜನ ಸೇರಿದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



