ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |10 JANUARY 2023

ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು.

Sagara-Bandh-Bajarangadal-Protest-March-in-the-city.

ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಅರ್ಧ ದಿನ ಬಂದ್ ಗೆ (bandh) ಕರೆ ನೀಡಿದ್ದವು.

ಸಾಗರ ಬಂದ್ ಹೇಗಿತ್ತು?

ನಗರದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ. ನಗರದೆಲ್ಲೆಡೆ ಅಂಗಡಿ ಮುಂಗಟ್ಟು, ಶಾಲೆ, ಕಾಲೇಜು ಬಂದ್ ಆಗಿದ್ದವು. ಬಸ್ ನಿಲ್ದಾಣದಲ್ಲಿ ಬಸ್ಸುಗಳು ಮತ್ತು ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರ ಕಡಿಮೆ ಇತ್ತು. ಸರ್ಕಾರಿ ಮತ್ತು ಕೆಲವು ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

Shimoga Live 3 Million Reach

ಇನ್ನು, ಬೆಳಗ್ಗೆಯಿಂದಲೆ ರಸ್ತೆಗಿಳಿದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ನಗರದ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಿದರು. ಮೀನು ಮಾರುಕಟ್ಟೆ ಬಳಿ ಹಿಂದು ಸಂಘಟನೆ ಕಾರ್ಯಕರ್ತರು, ವ್ಯಾಪಾರಿಗಳು, ಸ್ಥಳೀಯರ ನಡುವೆ ಮಾತಿನ ಚಕಮಕಿನ ನಡೆಯಿತು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ನಗರದಾದ್ಯಂತ ಮೆರವಣಿಗೆ

ಸಾಗರ ಬಂದ್ ಆಗುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬಡಾವಣೆ ಮತ್ತು ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮಾರಿಕಾಂಬ ದೇವಿ ದೇವಸ್ಥಾನದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಹಿಂದು ಸಂಘಟನೆಯ ಪ್ರಮುಖರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

ಶಾಸಕ ಹರತಾಳು ಹಾಲಪ್ಪ ಮಾತನಾಡಿ, ‘ಧರ್ಮದ ಆಧಾರದಲ್ಲಿ ಗಲಾಟೆ ಮಾಡಲು ಪ್ರಯತ್ನಿಸುವವರಿಗೆ ಪೊಲೀಸ್ ಇಲಾಖೆ ಲಾಠಿ ಮೂಲಕ ಉತ್ತರ ನೀಡಲಿದೆ. ಮಿತಿ ಮೀರಿದರೆ ಗುಂಡಿನ ರುಚಿಯನ್ನು ನೋಡಬೇಕಾಗುತ್ತದೆ. ನಿನ್ನೆಯ ಘಟನೆ ಸಂದರ್ಭ ಪೊಲೀಸ್ ಇಲಾಖೆ ಕ್ಷಿಪ್ರವಾಗಿ ಕೆಲಸ ಮಾಡಿ, ಆರೋಪಿಗಳನ್ನು ಬಂಧಿಸಿದೆ’ ಎಂದರು.

ಇದನ್ನೂ ಓದಿ – ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಅ.ಪು. ನಾರಾಯಣಪ್ಪ, ಯು.ಹೆಚ್.ರಾಮಪ್ಪ, ಕೆ.ಎಸ್.ಪ್ರಶಾಂತ್, ಟಿ.ಡಿ.ಮೇಘರಾಜ್, ಭಾರತಿ ಶೆಟ್ಟಿ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment