ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |10 JANUARY 2023

ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲಿನ ದಾಳಿ ಯತ್ನ ಪ್ರಕರಣದ ಆರೋಪಿ ಸಮೀರ್ ನ ಕುಟುಂಬದವರು (family) ಪತ್ರಿಕಾಗೋಷ್ಠಿ ನಡೆಸಿ, ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ಸಹೋದರಿಗೆ ಸುನಿಲ್ ಚುಡಿಯಿಸುತ್ತಿದ್ದ. ಇದೆ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

Sagara-Anjuman-and-Masjid-Trust-Press-meet-in-Sagara

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಮೀಯಾ ಮಸೀದಿ ಅಧ್ಯಕ್ಷ ಫಾರೂಕ್ ಶೇಕ್ ಅವರು, ಸೋಮವಾರ ಬೆಳಗ್ಗೆ ನಡೆದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಬ್ಬರ ನಡುವೆ ಜಗಳಕ್ಕೆ ಕಾರಣವೇನು ಅನ್ನುವುದು ಯಾರಿಗು ಸ್ಪಷ್ಟವಾಗಿಲ್ಲ. ಆದರೆ ಆ ಘಟನೆಯಿಂದ ನಗರದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಕುಟುಂಬದವರನ್ನು ಸಂಪರ್ಕಿಸಿದೆ ಎಂದರು. (family)

‘ನಾವೆ ಕರೆದೊಯ್ದು ಎಸ್ಪಿ ಕಚೇರಿಗೆ ಬಿಟ್ಟೆವು’

ಘಟನೆಯ ಬಳಿಕ ಸಮೀರ್ ಶಿವಮೊಗ್ಗಕ್ಕೆ ಹೋಗಿದ್ದ. ಅಲ್ಲಿ ಅವರ ಸಂಬಂಧಿಯೊಬ್ಬರ ಮನೆಯಲ್ಲಿದ್ದ. ನಾವೆ ಆತನನ್ನು ಎಸ್.ಪಿ ಕಚೇರಿಗೆ ಕರೆದೊಯ್ದು ಬಿಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

ವಾಟ್ಸಪ್ ನಲ್ಲಿ ಬಂದಿರುವ ವಿಡಿಯೋ ಗಮನಿಸಿದಾಗ ಸಮೀರ್ ಬಳಿ ಇರುವುದು ಕತ್ತಿಯೋ, ತಲ್ವಾರೋ, ಕಟ್ಟಿಗೆನೋ ಅನ್ನುವುದು ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಆದರೆ ಅವರ ಸಹೋದರಿ ಹೇಳುವ ಪ್ರಕಾರ, ತಾನು ಕಾಲೇಜಿಗೆ ಹೋಗುವಾಗ ಸುನಿಲ್ ಎಂಬಾತ ಹಿಜಾಬ್ ವಿಚಾರವಾಗಿ ಕಿರುಕುಳ ನೀಡುತ್ತಿದ್ದ. ತಮ್ಮ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ತಿಳಿಸಿದ್ದಾರೆ ಎಂದು ಹೇಳಿದರು.

Shimoga Live News Reach 3 million

ಯುವಕರ ಜಗಳಕ್ಕೆ ಕೋಮು ಬಣ್ಣ ಬೇಡ

ಅಂಜುಮನ್-ಎ-ಸಾಗರ ಸಮಿತಿ ಅಧ್ಯಕ್ಷ ಸಯ್ಯದ್ ಇಕ್ಬಾಲ್ ಅವರು ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ, ಇಬ್ಬರು ಯುವಕರ ನಡುವಿನ ಜಗಳಕ್ಕೆ ಕೋಮು ಬಣ್ಣ ಕಟ್ಟಿ, ನಗರದಲ್ಲಿ ಅಶಾಂತಿ ಸೃಷ್ಟಿಸುವುದು ಸರಿಯಲ್ಲ. ಕಾನೂನು ಬಾಹಿರ ಕೃತ್ಯ ಎಸಗುವವರ ಪರವಾಗಿ ಮುಸ್ಲಿಂ ಸಮುದಾಯ ಮತ್ತು ತಮ್ಮ ಸಮಿತಿ ನಿಲ್ಲುವುದಿಲ್ಲ ಎಂದರು.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಅಲ್ಲದೆ ಸತ್ಯಾಸತ್ಯತೆಯನ್ನು ಜನತೆಗೆ ತಿಳಿಸಲಿ. ಆದರೆ ವಿಚಾರಣೆ ನೆಪದಲ್ಲಿ ಅಮಾಯಕರಿಗೆ ಕಿರುಕುಳ ನೀಡಬಾರದು. ಸಾಗರ ಪಟ್ಟಣದಲ್ಲಿ ಶಾಂತಿ ನೆಲಸಬೇಕು. ಇದು ನಮ್ಮ ಪ್ರಮುಖ ಧ್ಯೇಯ ಎಂದು ಸಯ್ಯದ್ ಇಕ್ಬಾಲ್ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment