ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ 2 ತಿಂಗಳಲ್ಲಿ 3 ಕೇಸ್, ಏನಿದು ಪ್ರಕರಣ? ಹೇಗೆ ನಡೆಯುತ್ತಿದೆ ದುಷ್ಕೃತ್ಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JANUARY 2023

SHIMOGA : ನಗರದಲ್ಲಿ ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಮಹಿಳೆಯರನ್ನೆ ಟಾರ್ಗೆಟ್ (target women) ಮಾಡಿಕೊಂಡು ಅವರ ಚಿನ್ನದ ಸರಗಳನ್ನು ಲಪಟಾಯಿಸುತ್ತಿದ್ದಾರೆ.

ಎಲ್ಲೆಲ್ಲಿ ಏನೇನಾಗಿದೆ?

[su_highlight background=”#cd0003″ color=”#ffffff”]ಘಟನೆ 1 : ಗಾಂಧಿ ನಗರ[/su_highlight]

[su_note note_color=”#fff0c8″ text_color=”#000000″ radius=”0″]ಶಿವಮೊಗ್ಗದ ಗಾಂಧಿ ನಗರದಲ್ಲಿ ಬೈಕಿನಲ್ಲಿ ಬಂದ ಇಬ್ಬರು, ನಡೆದು ಹೋಗುತ್ತಿದ್ದ ಮಹಿಳೆಯನ್ನು ತಡೆದಿದ್ದಾರೆ. ನಾವು ಪೊಲೀಸರು ಎಂದು ಪರಿಚಯಿಸಿಕೊಂಡಿದ್ದಾರೆ. ಇಲ್ಲಿ ಕೊಲೆಯಾಗಿದೆ. ಚಿನ್ನದ ಸರ ಹಾಕಿಕೊಂಡು ಹೋಗಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಅದೃಷ್ಟವಶಾತ್ ಮಹಿಳೆ ಚಿನ್ನದ ಸರ ಬಿಚ್ಚಲಿಲ್ಲ.[/su_note]

[su_highlight background=”#cd0003″ color=”#ffffff”]ಘಟನೆ 2 : ವಿದ್ಯಾನಗರ[/su_highlight]

[su_note note_color=”#fff0c8″ text_color=”#000000″ radius=”0″]ವಿದ್ಯಾನಗರ ಜಗದಂಬ ಬೀದಿಯ ಮೇರಿ ಜೋಸ್ಫಿನ್ ಅವರು ನಡೆದು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ‘ತಾವು ಪೊಲೀಸರು’ ಎಂದು ಪರಿಚಯಿಸಿಕೊಂಡಿದ್ದಾರೆ.  ‘ಒಡವೆಗಳನ್ನು ಹಾಕಿಕೊಂಡು ಹೀಗೆಲ್ಲ ಓಡಾಡಬಾರದು. ಎಲ್ಲವನ್ನು ಈಗಲೆ ಬಿಚ್ಚಿ ಬ್ಯಾಗಿನಲ್ಲಿ ಹಾಕಿಕೊಳ್ಳಿ’ ಎಂದು ಆದೇಶಿಸಿದ್ದಾರೆ. ಸರ, ಬಳೆಯನ್ನು ಬಿಚ್ಚಿಸಿ, ತಾವೇ ಮೇರಿ ಜೋಸ್ಫಿನ್ ಅವರ ಬ್ಯಾಗಿನಲ್ಲಿ ಇಡುವಂತೆ ನಟಿಸಿದ್ದಾರೆ. ಮನೆಗೆ ಹೋಗಿ ಮೇರಿ ಜೋಸ್ಫಿನ್ ಅವರು ಪರಿಶೀಲಿಸಿದಾಗ 3.40 ಲಕ್ಷ ರೂ. ಮೌಲ್ಯದ ಒಡವೆಗಳು ಇರಲಿಲ್ಲ.[/su_note]

Police-Jeep-in-Shimoga-city

[su_highlight background=”#cd0003″ color=”#ffffff”]ಘಟನೆ 3 : ಎನ್.ಟಿ.ರಸ್ತೆ[/su_highlight]

[su_note note_color=”#fff0c8″ text_color=”#000000″ radius=”0″]ಹೊನ್ನಾಳಿಯ ಪಾರ್ವತಮ್ಮ ಅವರು ತನ್ನ ಸಹೋದರನ ಮನೆಗೆ ಭೇಟಿ ನೀಡಲು ಶಿವಮೊಗ್ಗಕ್ಕೆ ಬಂದಿದ್ದರು. ಬಸ್ ಇಳಿದು ಎನ್.ಟಿ.ರಸ್ತೆ ಮೂಲಕ ಸುಂದರ ಆಶ್ರಯ ಹೊಟೇಲ್ ಪಕ್ಕ ಗೌಡ ಸಾರಸ್ವತ ಕಲ್ಯಾಣ ಮಂದಿರಕ್ಕೆ ಹೋಗುವ ರಸ್ತೆಗೆ ತೆರಳುತ್ತಿದ್ದರು. ಅಲ್ಲೆ ನಿಂತಿದ್ದ ಮೂವರು, ತಾವು ಪೊಲೀಸರು ಎಂದು ಪರಿಚಯಿಸಿಕೊಂಡು ಪಾರ್ವತಮ್ಮ ಅವರನ್ನು ತಡೆದಿದ್ದಾರೆ. ‘ಹೀಗೆಲ್ಲ ಚಿನ್ನದ ಸರ ಹಾಕಿಕೊಂಡು ಹೋದರೆ ಕೊಲೆ ಮಾಡುತ್ತಾರೆ’ ಎಂದು ಹೆದರಿಸಿದ್ದಾರೆ. ಪಾರ್ವತಮ್ಮ ಅವರ ಚಿನ್ನದ ಸರವನ್ನು ಬಿಚ್ಚಿಸಿ, ಒಂದು ಪೇಪರ್ ನಲ್ಲಿ ಪೊಟ್ಟಣ ಕಟ್ಟಿದ್ದಾರೆ. ಸಹೋದರನ ಮೆನಗೆ ಹೋಗಿ ಪೊಟ್ಟಣ ತೆಗೆದಾಗ ನಕಲಿ ಚಿನ್ನದ ಸರವಿತ್ತು. ಜ.14ರಂದು ಘಟನೆ ಸಂಭವಿಸಿದೆ.[/su_note]

[su_highlight background=”#cd0003″ color=”#ffffff”]ಘಟನೆ 4 : ಸವಾರ್ ಲೈನ್ ರಸ್ತೆ[/su_highlight]

[su_note note_color=”#fff0c8″ text_color=”#000000″ radius=”0″]ವೈದ್ಯರೊಬ್ಬರ ಮನೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕಾಂತಮ್ಮ ಎಂಬುವವರನ್ನು ತಡೆದು, ತಾವು ಪೊಲೀಸ್ ಎಂದು ನಂಬಿಸಿದ್ದಾರೆ. ಆಕೆಯ ಕೊರಳಲ್ಲಿದ್ದ ಸರವನ್ನು ಬಿಚ್ಚಿಸಿ ಪೊಟ್ಟಣ ಕಟ್ಟಿ ಕೊಟ್ಟು, ಬೈಕಿನಲ್ಲಿ ತೆರಳಿದ್ದಾರೆ. ಜ.14ರಂದು ಮಧ್ಯಾಹ್ನ ಸವಾರ್ ಲೈನ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮನೆಗೆ ತೆರಳಿ ಪೊಟ್ಟಣ ತೆಗೆದಾಗ ನಕಲಿ ಚಿನ್ನದ ಸರವಿತ್ತು.[/su_note]

ನಕಲಿ ಪೊಲೀಸ್ ಹಾವಳಿ

ಶಿವಮೊಗ್ಗ ನಗರದಲ್ಲಿ ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಕಳೆದ 2 ತಿಂಗಳಲ್ಲಿ ನಾಲ್ಕು ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ (target women) ಮಾಡಿದ್ದಾರೆ. 3 ಪ್ರಕರಣದಲ್ಲಿ ಮಹಿಳೆಯರ ಸರ, ಬಳೆಗಳನ್ನು ಲಪಟಾಯಿಸಲಾಗಿದೆ. ಕೋಟೆ ಠಾಣೆಯಲ್ಲಿ ಒಂದು, ದೊಡ್ಡಪೇಟೆ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Live News Webiste 3 million views

ಒಂದೇ ರೀತಿಯ ಕಾರ್ಯಾಚರಣೆ

ನಕಲಿ ಪೊಲೀಸರು ನಾಲ್ಕು ಕಡೆಯು ಒಂದೇ ರೀತಿ ದುಷ್ಕೃತ್ಯ ಎಸಗಿದ್ದಾರೆ. ಹಾಗಾಗಿ ಇಂತಹವರ ಕುರಿತು ಜನರು ಜಾಗೃತರಾಗಬೇಕಿದೆ. ಮಹಿಳೆಯರು ತಮ್ಮ ಚಿನ್ನಾಭರಣದ ಕುರಿತು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

  • ನಾಲ್ಕು ಪ್ರಕರಣದಲ್ಲಿಯು ತಾವು ಪೊಲೀಸ್ ಎಂದು ಪರಿಚಯಿಸಿಕೊಂಡು, ಮಹಿಳೆಯರಲ್ಲಿ ಭರವಸೆ ಮೂಡುವಂತೆ ಮಾಡಿದ್ದಾರೆ. ಆ ಬಳಿಕ ಕೃತ್ಯ ಎಸಗಿದ್ದಾರೆ. ಚಿನ್ನಾಭರಣ ಬಿಚ್ಚಿಸಿಕೊಂಡ ಮರು ಕ್ಷಣ ಅಲ್ಲಿಂದ ಕಾಲು ಕಿತ್ತಿದ್ದಾರೆ.
  • ಮೂರು ಪ್ರಕರಣದಲ್ಲಿಯು ಜನ ಸಂಚಾರ ಕಡಿಮೆ ಇರುವ ಸಮಯ ಮತ್ತು ಜಾಗವನ್ನು ಆಯ್ಕೆ ಮಾಡಿಕೊಂಡು ದುಷ್ಕೃತ್ಯ ಎಸಗಿದ್ದಾರೆ. ಹಬ್ಬಗಳಂದೆ ಒಂಟಿ ಮಹಿಳೆಯರನ್ನೆ ಇವರು ಟಾರ್ಗೆಟ್ ಮಾಡಿಕೊಂಡಿದ್ದಾರೆ.
  • ಮಹಿಳೆಯರಲ್ಲಿ ಭಯ ಹುಟ್ಟಿಸಿ ಕೃತ್ಯ ಎಸಗಿದ್ದಾರೆ. ‘ಕೊಲೆಯಾಗಿದೆ’, ‘ಕೊಲೆ ಮಾಡುತ್ತಾರೆ’ ಎಂದು ಜೀವ ಭಯ ಮೂಡಿಸಿ, ಚಿನ್ನಾಭರಣಗಳನ್ನು ಬಿಚ್ಚಿಸಿದ್ದಾರೆ.
  • ಚಿನ್ನಾಭರಣವನ್ನು ಬಿಚ್ಚಿಸಿದ ನಕಲಿ ಪೊಲೀಸರು ತಾವೇ ಪೊಟ್ಟಣ ಕಟ್ಟಿದ್ದಾರೆ. ನಕಲಿ ಚಿನ್ನಾಭರಣವನ್ನು ಬ್ಯಾಗಿನಲ್ಲಿ ಇಟ್ಟು ಕಳುಹಿಸಿದ್ದಾರೆ.

ತಕ್ಷಣ ಪೊಲೀಸರಿಗೆ ಫೋನ್ ಮಾಡಿ

ಯಾರಂದರೆ ಅವರು ತಮ್ಮನ್ನು ತಾವು ಪೊಲೀಸರು ಎಂದು ಪರಿಚಯಿಸಿಕೊಂಡಾಗ ಜನರು ಎಚ್ಚರ ವಹಿಸಬೇಕಿದೆ. ತಕ್ಷಣಕ್ಕೆ ಪೊಲೀಸ್ ಕಂಟ್ರೋಲ್ ರೂಂಗೆ ಅಥವಾ 112 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡಬೇಕಿದೆ. ಆಗ ಕಳ್ಳರ ಪತ್ತೆ ಕಾರ್ಯ ಸುಲಭವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment