ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2023
SHIMOGA | ಮುಂಜಾಗ್ರತೆ ವಹಿಸದೆ ಕಾರು ಬಾಗಿಲು (Car Door) ತೆಗೆದಿದ್ದರಿಂದ ಹಿಂಬದಿ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಸವಾರನಿಗೆ ಗಾಯವಾಗಿದೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ. ನಂದಿನಿ ಹಾಲಿನ ಕೇಂದ್ರದ ಪಕ್ಕದಲ್ಲಿ ಗಾಂಧಿ ನಗರಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿ ಕಾರು ನಿಂತಿತ್ತು. ಚಾಲಕ ಏಕಾಏಕಿ ಕಾರು ಬಾಗಿಲು (Car Door) ತೆಗೆದಿದ್ದಾನೆ. ತಿಲಕನಗರ ಕಡೆಯಿಂದ ಗಾಂಧಿ ನಗರ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಗಿಲು ತಾಗಿದೆ. ನಿಯಂತ್ರಣ ತಪ್ಪಿ ಸವಾರ ಗಾಜನೂರಿನ ಶಿವರುದ್ರಪ್ಪ ಕೆಳಗೆ ಬಿದ್ದಿದ್ದಾರೆ. ಕಾಲು ಮತ್ತು ಕಾಲಿನ ಬೆರಳಿಗೆ ಗಾಯವಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಈ ಬ್ರ್ಯಾಂಡ್ ಭಾರಿ ಫೇಮಸ್, ವಿದೇಶಕ್ಕು ತಲುಪುತ್ತಿದೆ ಮಲೆನಾಡ ಟೇಸ್ಟ್, MN ಪಿಕಲ್ಸ್ ಬಗ್ಗೆ ನಿಮಗೆಷ್ಟು ಗೊತ್ತು?
ಶಿವರುದ್ರಪ್ಪ ಅವರನ್ನ ಸುಬ್ಬಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಚಾಲಕನ ವಿರುದ್ಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














