ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JANUARY 2023
SHIMOGA : ಮತದಾನ ಕೇಂದ್ರ ಬದಲಾವಣೆ (voting booth) ಮಾಡದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಸ್ವಾಮಿ ವಿವೇಕಾನಂದ ಬಡಾವಣೆಯ ಸೌಹಾರ್ದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯರು, ಸ್ವಾಮಿ ವಿವೇಕಾನಂದ ಬಡಾವಣೆಯ ಇ, ಸಿ, ಡಿ, ಬ್ಲಾಕ್ ಗಳ ವ್ಯಾಪ್ತಿ ವಾಸ್ತವವಾಗಿ ಮಹಾನಗರ ಪಾಲಿಕೆಯ 17ನೇ ವಾರ್ಡ್ಗೆ ಸೇರುತ್ತದೆ. ಆದರೆ ಈ ವಾರ್ಡ್ನ ಮತದಾರರನ್ನು 6ನೇ ವಾರ್ಡ್ ಗಾಡಿಕೊಪ್ಪಕ್ಕೆ ಸೇರಿಸಲಾಗಿದೆ. ನಮ್ಮ ವಾರ್ಡ್ನ ಮತದಾರರನ್ನು ಗಾಡಿಕೊಪ್ಪ ವಾರ್ಡ್ಗೆ ಸೇರಿಸಿರುವುದರಿಂದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಮತದಾನ ಮಾಡಲು ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ನಮ್ಮ ವಾರ್ಡ್ನಿಂದ ದೂರದ 6ನೇ ವಾರ್ಡ್ಗೆ ಹೋಗುವುದನ್ನು ತಪ್ಪಿಸಿ. ಎಲ್ಲಾ ಮತಗಳನ್ನು 17ನೇ ವಾರ್ಡ್ಗೆ ಸೇರಿಸಬೇಕು. ಪಕ್ಕದಲ್ಲೇ ಇರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೂತನ ಬೂತ್ (voting booth) ಸ್ಥಾಪಿಸಬೇಕು. ಈ ಮೂಲಕ ಮತದಾರರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?
ಸಂಘದ ಅಧ್ಯಕ್ಷ ಎಸ್.ಬಿ. ರಾಮಪ್ಪ ಗೌಡ, ಹೆಚ್.ಪಿ. ರಮೇಶ್, ಸಮಿತಿ ಸದಸ್ಯರಾದ ವಿ.ಟಿ.ಅರುಣ್, ಎಸ್.ಜಿ. ನಾಯಕ್, ಕೃಷ್ಣಮೂರ್ತಿ, ಕಿರಣ್ ಇದ್ದರು.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













