ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಪೋಸ್ಟರ್ ವೈರಲ್, ಏನಿದೆ ಅದರಲ್ಲಿ? ವೈರಲ್ ಆಗಿದ್ದೇಕೆ?

SHIVAMOGGA LIVE NEWS | 3 FEBRUARY 2023

SHIMOGA : ವಿಧಾನ ಸಭೆ ಚುನಾವಣೆಗೆ ಶಿವಮೊಗ್ಗ ನಗರದಿಂದ ಬಿಜೆಪಿ ಅಭ್ಯರ್ಥಿ (BJP Candidate) ಯಾರಾಗುತ್ತಾರೆ ಎಂಬ ಕುತೂಹಲದ ನಡುವೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರು ಮುನ್ನೆಲೆಗೆ ಬಂದಿದೆ. ಆಯನೂರು ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂಬ ಪೋಸ್ಟ್ (Post) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.

Shivamogga-Live-Number-1-Website

041119 Ayanur Manjunath Press Meet 1

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿದೆ. ಹಾಗಾಗಿ ಬಿಜೆಪಿಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆ.ಈ.ಕಾಂತೇಶ್ ಅವರು ತಮ್ಮ ಉತ್ತರಾಧಿಕಾರಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ಬಿಂಬಿಸಲು ಮುಂದಾಗಿದ್ದಾರೆ. ಈ ನಡುವೆ ಆಯನೂರು ಮಂಜುನಾಥ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈಗ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೈರಲ್ (Viral) ಆಗಿದೆ.

ಏನಿದು ಪೋಸ್ಟ್?

ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಆಯನೂರು ಮಂಜುನಾಥ್ ಅವರ ಪರವಾಗಿ ಪೋಸ್ಟರ್ ಗಳು ಷೇರ್ ಆಗುತ್ತಿವೆ. ‘ನಗರದಲ್ಲಿ ಶಾಂತಿ ನೆಮ್ಮದಿಗಾಗಿ ಕೈಗಾರಿಕೆ, ವ್ಯಾಪಾರ, ವಹಿವಾಟುಗಳು ನಿರ್ಭಯವಾಗಿ ನಡೆದು ಬಡವರ ಬದುಕು ಹಸನಾಗಿಸಲು ಆಯನೂರು ಮಂಜುನಾಥ್ ಅವರಿಗೆ ಅವಕಾಶ ಸಿಗಲಿ’ ಎಂದು ಪೋಸ್ಟರ್ ಗಳು ವೈರಲ್ ಆಗುತ್ತಿವೆ.

IMG 20230202 WA0014

ಎಲ್ಲೆಲ್ಲಿ ವೈರಲ್ ಆಗುತ್ತಿದೆ?

ಆಯನೂರು ಮಂಜುನಾಥ್ ಅವರು ಕಾರ್ಮಿಕ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಕಾರ್ಮಿಕರ ವಲಯದಲ್ಲಿ ಈ ಪೋಸ್ಟರ್ ಹೆಚ್ಚಿಗೆ ಷೇರ್ ಆಗುತ್ತಿದೆ. ಕಾರ್ಮಿಕರ ವಾಟ್ಸಪ್ ಗುಂಪುಗಳು, ಶಿಕ್ಷಕರು, ಉಪನ್ಯಾಸಕರ ಗುಂಪುಗಳು, ಉದ್ಯಮಿಗಳ ವಲಯದಲ್ಲಿ ಪೋಸ್ಟರ್ ಷೇರ್ ಆಗುತ್ತಿದೆ. ಫೇಸ್ ಬುಕ್ಕಿನಲ್ಲಿಯು ಕೂಡ ಪೋಸ್ಟರ್ ಕಾಣಸಿಗುತ್ತಿದೆ.

ಇನ್ನೊಂದು ವರ್ಷ ಅವಧಿ ಇದೆ

ಆಯನೂರು ಮಂಜುನಾಥ್ ಅವರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. 2024ರ ಜೂನ್ ವರೆಗೆ ಅವರಿಗೆ ಅಧಿಕಾರವಧಿ ಇದೆ. ಹೀಗಿದ್ದೂ ಅವರ ಅಭಿಮಾನಿಗಳು ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

JANUARY-2023-REACH

ಕೆ.ಎಸ್.ಈಶ್ವರಪ್ಪ ಅವರು 2018ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವಾಗ ಅವರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದರು. ಅವರ ಎಂ.ಎಲ್.ಸಿ ಅವಧಿ ಇನ್ನೂ ಎರಡು ವರ್ಷವಿತ್ತು. ಈಗಿನ ಎಂ.ಎಲ್.ಸಿ ರುದ್ರೇಗೌಡ ಅವರು ಆಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಕೆ.ಎಸ್.ಈಶ್ವರಪ್ಪ ಅವರಿಗೆ ಅವಕಾಶ ಕಲ್ಪಿಸಲಾಗಿತ್ತು. ಅದೆ ರೀತಿ ಆಯನೂರು ಮಂಜುನಾಥ್ ಅವರಿಗೂ ಅವಕಾಶ ಸಿಗಬಹುದು ಎಂಬುದು ಅವರ ಅಭಿಮಾನಿಗಳ ವಿಶ್ವಾಸ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಗ್ರಾಮ ಪಂಚಾಯಿತಿಯ 4 ಸ್ಥಾನಕ್ಕೆ ಉಪ ಚುನಾವಣೆ, ದಿನಾಂಕ ನಿಗದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 3, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment