ಶಿವಮೊಗ್ಗದಲ್ಲಿ ರವಿ ಚನ್ನಣ್ಣನವರ್, ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 FEBRUARY 2023

SHIMOGA : ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಜಗದಲ್ಲಿ ರೋಗ ರುಜಿನಕ್ಕೆ ಶಿಕ್ಷಣವೇ ಮದ್ದು ಎಂದು ಐಪಿಎಸ್ ಅಧಿಕಾರಿ, ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. (Ravi Channannavar)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೋಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Ravi-Channannanavar-Inaugurates-programme-in-JNNCE-College

ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯ. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ನಮ್ಮ ಓದಿನ ಹಪಾಹಪಿಯಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ ಎಂದರು.

ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?

ಪೋಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೋಲೀಸರ ಪಾತ್ರ ಮಹತ್ವದ್ದು ಎಂದು ಹೇಳಿದರು.

ಕಿಯೋನಿಕ್ಸ್ ನಿಂದ ವಿವಿಧ ಕೋರ್ಸ್

ಕಿಯೋನಿಕ್ಸ್ ಸಂಸ್ಥೆಯಿಂದ ಐಐಟಿ ಐಐಎಂ ಪ್ರೊಫೆಸರ್ ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್‌ಗಳನ್ನು ಒದಗಿಸುತ್ತಿದೆ. ಈ ಮೂಲಕ ಸಾಮಾನ್ಯ ಮತ್ತು ಗ್ರಾಮೀಣ ಪ್ರದೇಶದ ಯುವ ಸಮೂಹದ ಸಬಲೀಕರಣ ಸಾಧ್ಯವಾಗಲಿದೆ. ಕಿಯೋನಿಕ್ಸ್ ಪೂರಕ ವೇದಿಕೆಗಳನ್ನು ಬಳಸಿಕೊಳ್ಳಿ ಎಂದರು.

JANUARY-2023-REACH

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕರಾದ ಕುಮಾರ್.ಪಿ, ಕೋರ್ಸ್ ನಿರ್ದೇಶಕ ಡಾ.ಸರೀತ್ ಕುಮಾರ್, ಜೆ.ಎನ್.ಎನ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment