ರಾಜ್ಯ ಸರ್ಕಾರಿ ನೌಕರರು, ಪೊಲೀಸರು, ಶೈಕ್ಷಣಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್ ನಿರೀಕ್ಷೆ

SHIVAMOGGA LIVE NEWS | 8 FEBRUARY 2023

SHIMOGA : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಬೇಕು, ಪೊಲೀಸ್ ಇಲಾಖೆಯಲ್ಲಿ ವೇತನ ತಾರತಮ್ಯ ನಿವಾರಣೆಯಾಗಬೇಕು ಸೇರಿದಂತೆ ಕಾರ್ಮಿಕರು, ಶೈಕ್ಷಣಿಕ ಸಾಲ ಪಡೆದವರು, ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ. ಈ ಭಾರಿ ಬಜೆಟ್ ನಲ್ಲಿ ಸಮಸ್ಯೆಗಳು ಪರಿಹಾರ ಕಾಣಬಹುದು ಎಂಬ ನಿರೀಕ್ಷೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.

Shivamogga-Live-Number-1-Website

080223 Ayanur Manjunath Press Meet in Shimoga jpg

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ಕಳೆದ ಮೂರು ಬಜೆಟ್ ಅವಧಿಯಲ್ಲಿಯು ಈ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೆ. ಈ ಭಾರಿಯು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ. ನಾಳೆ ಶಿವಮೊಗ್ಗಕ್ಕೆ ಸಿಎಂ ಆಗಮಿಸುತ್ತಿದ್ದಾರೆ. ಅಗ ಪುನಃ ಮನವಿ ನೀಡಲಿದ್ದೇನೆ ಎಂದರು.

ಏನೆಲ್ಲ ಮನವಿ ಮಾಡಲಿದ್ದಾರೆ?

ರಾಜ್ಯದ 3 ಲಕ್ಷ ಸರ್ಕಾರಿ ನೌಕರರು ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ಹಳೆ ಪಿಂಚಣಿ ನೀತಿ ಜಾರಿಗೊಳಿಸಬೇಕು. ಈ ಮೂಲಕ ನೌಕರರು ನಿವೃತ್ತರಾದ ಮೇಲೆ ಜೀವನ ನಿರ್ವಹಣೆಗೆ ನಿರ್ದಿಷ್ಟ ಮೊತ್ತ ಸಿಗುವಂತಾಗಬೇಕು. ಅವರ ಕುಟುಂಬಕ್ಕೆ ದಾರಿ ತೋರಿಸಬೇಕು ಎಂದು ಆಯನೂರು ಮಂಜುನಾಥ್ ಒತ್ತಾಯಿಸಿದರು.

ಪೊಲೀಸ್ ಇಲಾಖೆಯಲ್ಲಿ ವೇತನ ತಾರತಮ್ಯವಾಗಿದೆ. ಸೇವಾ ಹಿರಿತನ ಇರುವವರಿಗೆ ಕಡಿಮೆ ವೇತನ, ಹೊಸದಾಗಿ ಆಯ್ಕೆಯಾದವರಿಗೆ ಹಚ್ಚಿಗೆ ಸಂಬಳವಿದೆ. ಈ ನ್ಯೂನತೆ ಸರಿಪಡಿಸಬೇಕು. ಬಡ್ತಿ ಹೊಂದಿದವರಿಗೆ ಭತ್ಯೆ, ರಜಾ ದಿನಗಳು ಕಡಿತವಾಗಿದೆ. ರಜಾ ರಹಿತವಾಗಿ ಕರ್ತವ್ಯ ನಿರ್ವಹಿಸುವವರಿಗೆ ಈ ಹಿಂದೆ 13 ತಿಂಗಳು ವೇತನ ನೀಡಲಾಗುತ್ತಿತ್ತು. ಈಗ ಹನ್ನೆರಡುವರೆ ತಿಂಗಳ ವೇತನ ನೀಡಲಾಗುತ್ತಿದೆ. ಅದನ್ನು ಪುನಃ 13 ತಿಂಗಳಿಗೆ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?

ಅಪಘಾತಗಳಲ್ಲಿ ಹಲವು ವಾಹನ ಚಾಲಕರು, ಕಾರ್ಮಿಕರು ಅಂಗವಿಲಕರಾಗುತ್ತಿದ್ದಾರೆ. ಅವರ ರಕ್ಷಣೆಗೆ ಮೋಟಾರ್ ವಾಹನ ಚಾಲಕರು, ನೌಕರರ ಕಲ್ಯಾಣ ಮಂಡಳಿ ರಚಿಸಬೇಕು. ಶೈಕ್ಷಣಿಕ ಸಾಲ ಪಡೆದು ಶಿಕ್ಷಣ ಮುಗಿಸಿದರು ಕೆಲಸ ಸಿಗದೆ ಯುವಕರು ಕಷ್ಟಪಡುತ್ತಿದ್ದಾರೆ. ಆದ್ದರಿಂದ ಪ್ರಸಕ್ತ ಬಜೆಟ್ ನಲ್ಲಿ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹುಲಿ ದತ್ತು ಪಡೆದ ಸರ್ಕಾರಿ ನೌಕರರ ಸಂಘ, ದತ್ತು ಪಡೆಯೋದು ಹೇಗೆ?

ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರ ಸೇವೆಯನ್ನು ಒಂದು ಬಾರಿ ಖಾಯಂಗೊಳಿಸಬೇಕು. ವಿಶೇಷ ಪ್ರಕರಣ ಎಂದು ಪರಿಗಣಿಸಿ ಬಜೆಟ್ ನಲ್ಲಿ ಸೇವೆ ಖಾಯಂ ಘೋಷಣೆ ಮಾಡಬೇಕು ಎಂದು ಆಯನೂರು ಮಂಜುನಾಥ್ ಅವರು ಮನವಿ ಮಾಡಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 8, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment