ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 FEBRURARY 2023
SAGARA : ಶ್ರೀ ಮಾರಿಕಾಂಬ ದೇವಿಯನ್ನು (Marikamba Jatre) ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ನಡೆಯಿತು. ಈ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿದೆ.

ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದೆ. ಬುಧವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ ವನಕ್ಕೆ ಬಿಡಲಾಯಿತು.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ, ಹರಿದು ಬಂತು ಲಕ್ಷ ಲಕ್ಷ ಕಾಣಿಕೆ
ರಾಜಬೀದಿ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು. ಡೊಳ್ಳು ತಂಡಗಳು, ವೇಷಭೂಷಣಗಳ ನೃತ್ಯ ಕಲಾವಿದರು, ವಿವಿಧ ವಾದ್ಯಗಳ ತಂಡದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಾವಿರಾರು ಜನರು ಮಧ್ಯರಾತ್ರಿ ಆರಂಭಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡರು.
LATEST NEWS
- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



