ವಿಮಾನ ನಿಲ್ದಾಣದ ಪಕ್ಕದಲ್ಲಿ ಸಾಲು ಸಾಲು ಬಡಾವಣೆ ನಿರ್ಮಾಣ, ಗ್ರಾಮಸ್ಥರ ಧರಣಿ, ಆಕ್ರೋಶಕ್ಕೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRURARY 2023

SHIMOGA : ವಿಮಾನ ನಿಲ್ದಾಣ ಪಕ್ಕದಲ್ಲಿ ಮನಸೋಯಿಚ್ಛೆ ಬಡಾವಣೆಗಳ (Layout) ನಿರ್ಮಾಣಕ್ಕೆ ಅನುಮತಿ ನೀಡುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪಕ್ಕದ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೆ ಕಾರಣಕ್ಕೆ ಗ್ರಾಮಸ್ಥರು ಇಡೀ ದಿನ ಪ್ರತಿಭಟನೆ ನಡೆಸಿದರು.

210223 Protest against Layout permission near airport at Korlahalli kachinakatte

ಶಿವಮೊಗ್ಗ ವಿಮಾನ ನಿಲ್ದಾಣದ ಪಕ್ಕದಲ್ಲೆ ಇರುವು ಕೊರ್ಲಹಳ್ಳಿ ಕಾಚಿನಕಟ್ಟೆ ಅವಳಿ ಗ್ರಾಮಗಳ ಜನರು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ತಮ್ಮ ಮನವಿಗೆ ಸ್ಪಂದಿಸಬೇಕು ಎಂದು ಪಟ್ಟು ಹಿಡಿದರು.

ಮನಸೋಯಿಚ್ಛೆ ಬಡಾವಣೆ ನಿರ್ಮಾಣ

ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭವಾಗುತ್ತಿದ್ದಂತೆ ಸುತ್ತಮುತ್ತಲು ತೋಟ, ಗದ್ದೆಗಳನ್ನು ಬಡಾವಣೆಗಳಾಗಿ ಪರಿವರ್ತನೆ ಮಾಡಲಾಗುತ್ತಿದೆ. ಐದಾರು ವರ್ಷದಿಂದ ಈಚೆಗೆ 8 ಬಡಾವಣೆಗಳು ನಿರ್ಮಾಣವಾಗಿದ್ದು 450 ನಿವೇಶನ ಅಭಿವೃದ್ಧಿಪಡಿಸಲಾಗಿದೆ. ಕೆಲವು ಮನೆಗಳು ಕೂಡ ನಿರ್ಮಾಣವಾಗಿದೆ. ಬಡಾವಣೆ ನಿರ್ಮಿಸಲು ಇನ್ನಷ್ಟು ತೋಟ, ಗದ್ದೆ ಖರೀದಿಸಲಾಗಿದೆ. ಕೆಲವೇ ವರ್ಷದಲ್ಲಿ ಮತ್ತಷ್ಟು ನಿವೇಶನ ಸಿದ್ಧವಾಗಲಿದೆ. ಆದರೆ ಅಧಿಕಾರಿಗಳು ಬಡಾವಣೆ ನಿರ್ಮಾಣಕ್ಕೆ ಮನಸೋಯಿಚ್ಛೆ ಅನುಮತಿ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

protest%20korlahalli

ಮೂಲ ಸೌಕರ್ಯವಿಲ್ಲ

ಕೊರ್ಲಹಳ್ಳಿ – ಕಾಚಿನಕಟ್ಟೆ ಗ್ರಾಮಗಳು ವಿಮಾನ ನಿಲ್ದಾಣದ ಪಕ್ಕದಲ್ಲಿಯೇ ಇದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಸರಿಯಾದ ಸಂಪರ್ಕ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ, ಕುಡಿಯುವ ನೀರಿನ ಸಮಸ್ಯೆ ಇದೆ. ಇದ್ಯಾವುದನ್ನು ಸರಿಪಡಿಸದೆ ಬಡಾವಣೆಗಳಿಗೆ ಅನುಮತಿ ನೀಡುತ್ತಿರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.

ಇಡೀ ದಿನ ಪ್ರತಿಭಟನೆ

ಬಡಾವಣೆಗಳಿಗೆ ಮನಸೋಯಿಚ್ಛೆ ಅನುಮತಿ ನೀಡುತ್ತಿರುವುದು, ಮೂಲ ಸೌಕರ್ಯ ಒದಗಿಸದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಕೊರ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇರಿಸಿಕೊಂಡು ಗ್ರಾಮಸ್ಥರು ಪ್ರತಿಭಟನೆ ಮಾಡಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.

ಇದನ್ನೂ ಓದಿ – ವಿಮಾನ ನಿಲ್ದಾಣದ ಮುಂದೆ ದನ, ಕರುಗಳನ್ನು ಕರೆದೊಯ್ದು ಕುಟುಂಬ ಸಹಿತ ಪ್ರತಿಭಟನೆಗೆ ಸಜ್ಜಾದ ರೈತರು

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್, ಮಾಜಿ ಸದಸ್ಯ ಕೆ.ಪಿ.ವಿಶ್ವನಾಥ್, ಪ್ರದೀಪ್, ವಸಂತ, ವಹಿಳೆಯರು ಮತ್ತು ಮಕ್ಕಳು ಪ್ರತಿಭಟನೆಯಲ್ಲಿ ಭಾಗಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment