ವಿಮಾನ ನಿಲ್ದಾಣದ ಪಕ್ಕದಲ್ಲಿ ಸಾಲು ಸಾಲು ಬಡಾವಣೆ ನಿರ್ಮಾಣ, ಗ್ರಾಮಸ್ಥರ ಧರಣಿ, ಆಕ್ರೋಶಕ್ಕೇನು ಕಾರಣ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 FEBRURARY 2023

SHIMOGA : ವಿಮಾನ ನಿಲ್ದಾಣ ಪಕ್ಕದಲ್ಲಿ ಮನಸೋಯಿಚ್ಛೆ ಬಡಾವಣೆಗಳ (Layout) ನಿರ್ಮಾಣಕ್ಕೆ ಅನುಮತಿ ನೀಡುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪಕ್ಕದ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೆ ಕಾರಣಕ್ಕೆ ಗ್ರಾಮಸ್ಥರು ಇಡೀ ದಿನ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

210223 Protest against Layout permission near airport at Korlahalli kachinakatte

ಶಿವಮೊಗ್ಗ ವಿಮಾನ ನಿಲ್ದಾಣದ ಪಕ್ಕದಲ್ಲೆ ಇರುವು ಕೊರ್ಲಹಳ್ಳಿ ಕಾಚಿನಕಟ್ಟೆ ಅವಳಿ ಗ್ರಾಮಗಳ ಜನರು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ತಮ್ಮ ಮನವಿಗೆ ಸ್ಪಂದಿಸಬೇಕು ಎಂದು ಪಟ್ಟು ಹಿಡಿದರು.

ಮನಸೋಯಿಚ್ಛೆ ಬಡಾವಣೆ ನಿರ್ಮಾಣ

ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭವಾಗುತ್ತಿದ್ದಂತೆ ಸುತ್ತಮುತ್ತಲು ತೋಟ, ಗದ್ದೆಗಳನ್ನು ಬಡಾವಣೆಗಳಾಗಿ ಪರಿವರ್ತನೆ ಮಾಡಲಾಗುತ್ತಿದೆ. ಐದಾರು ವರ್ಷದಿಂದ ಈಚೆಗೆ 8 ಬಡಾವಣೆಗಳು ನಿರ್ಮಾಣವಾಗಿದ್ದು 450 ನಿವೇಶನ ಅಭಿವೃದ್ಧಿಪಡಿಸಲಾಗಿದೆ. ಕೆಲವು ಮನೆಗಳು ಕೂಡ ನಿರ್ಮಾಣವಾಗಿದೆ. ಬಡಾವಣೆ ನಿರ್ಮಿಸಲು ಇನ್ನಷ್ಟು ತೋಟ, ಗದ್ದೆ ಖರೀದಿಸಲಾಗಿದೆ. ಕೆಲವೇ ವರ್ಷದಲ್ಲಿ ಮತ್ತಷ್ಟು ನಿವೇಶನ ಸಿದ್ಧವಾಗಲಿದೆ. ಆದರೆ ಅಧಿಕಾರಿಗಳು ಬಡಾವಣೆ ನಿರ್ಮಾಣಕ್ಕೆ ಮನಸೋಯಿಚ್ಛೆ ಅನುಮತಿ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

protest%20korlahalli

ಮೂಲ ಸೌಕರ್ಯವಿಲ್ಲ

ಕೊರ್ಲಹಳ್ಳಿ – ಕಾಚಿನಕಟ್ಟೆ ಗ್ರಾಮಗಳು ವಿಮಾನ ನಿಲ್ದಾಣದ ಪಕ್ಕದಲ್ಲಿಯೇ ಇದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಸರಿಯಾದ ಸಂಪರ್ಕ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ, ಕುಡಿಯುವ ನೀರಿನ ಸಮಸ್ಯೆ ಇದೆ. ಇದ್ಯಾವುದನ್ನು ಸರಿಪಡಿಸದೆ ಬಡಾವಣೆಗಳಿಗೆ ಅನುಮತಿ ನೀಡುತ್ತಿರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.

ಇಡೀ ದಿನ ಪ್ರತಿಭಟನೆ

ಬಡಾವಣೆಗಳಿಗೆ ಮನಸೋಯಿಚ್ಛೆ ಅನುಮತಿ ನೀಡುತ್ತಿರುವುದು, ಮೂಲ ಸೌಕರ್ಯ ಒದಗಿಸದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಕೊರ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇರಿಸಿಕೊಂಡು ಗ್ರಾಮಸ್ಥರು ಪ್ರತಿಭಟನೆ ಮಾಡಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.

ಇದನ್ನೂ ಓದಿ – ವಿಮಾನ ನಿಲ್ದಾಣದ ಮುಂದೆ ದನ, ಕರುಗಳನ್ನು ಕರೆದೊಯ್ದು ಕುಟುಂಬ ಸಹಿತ ಪ್ರತಿಭಟನೆಗೆ ಸಜ್ಜಾದ ರೈತರು

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್, ಮಾಜಿ ಸದಸ್ಯ ಕೆ.ಪಿ.ವಿಶ್ವನಾಥ್, ಪ್ರದೀಪ್, ವಸಂತ, ವಹಿಳೆಯರು ಮತ್ತು ಮಕ್ಕಳು ಪ್ರತಿಭಟನೆಯಲ್ಲಿ ಭಾಗಹಿಸಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment