ವಿಮಾನದ ರನ್ ವೇ ರೀತಿ ರೆಡಿಯಾಗ್ತಿದೆ ಶಿವಮೊಗ್ಗ – ಕಾಚಿನಕಟ್ಟೆ ರೋಡ್, ಭಯ ಹುಟ್ಟಿಸಿದ್ದ ಗುಂಡಿಗಳೆಲ್ಲ ಈಗ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRURARY 2023

SHIMOGA : ವಿಮಾನ ನಿಲ್ದಾಣ ಲೋಕಾರ್ಪಣೆ ಹಿನ್ನೆಲೆ ಶಿವಮೊಗ್ಗ – ಕಾಚಿನಕಟ್ಟೆ ನಡುವೆ ರಸ್ತೆ ಸಂಪೂರ್ಣ ಸ್ವಚ್ಚವಾಗುತ್ತಿದೆ. ವರ್ಷಗಟ್ಟಲೆ ಬಾಯ್ತೆರೆದು ಕೂತಿದ್ದ ಗುಂಡಿಗಳು ಬಂದ್ ಆಗಿವೆ. ವಿಮಾನ ನಿಲ್ದಾಣದ ರನ್ ವೇ (Run Way) ಮಾದರಿಯಲ್ಲೇ ರಸ್ತೆ ನಳನಳಿಸಲು ಆರಂಭವಾಗಿದೆ.

Shimoga-Kachinakatte-Road-Cleaining-Airport-inauguration

ಎಲ್ಲವೂ ಕ್ಲೀನ್ ಕ್ಲೀನ್

ಶಿವಮೊಗ್ಗ ಕಾಚಿನಕಟ್ಟೆ ನಡುವೆ ಡಬಲ್ ರೋಡ್ ಇದೆ. ವಿಶಾಲವಾದ ಡಿವೈಡರ್ ಕೂಡ ಇದೆ. ಆರೇಳು ತಿಂಗಳಿಗೆ ಒಮ್ಮೆ ಕಳೆ ತೆಗೆಯಲಾಗುತ್ತಿತ್ತು. ಆದರೆ ವಿಮಾನ ನಿಲ್ದಾಣ ಲೋಕಾರ್ಪಣೆ ಹಿನ್ನೆಲೆ ಡಿವೈಡರ್ ಮೇಲೆ ಬೆಳೆದಿದ್ದ ಕಳೆ, ಬಿದ್ದಿದ ಕಸ ಸಂಪೂರ್ಣ ಕ್ಲೀನ್ ಮಾಡಲಾಗುತ್ತಿದೆ. ಜೆಸಿಬಿ, ಟ್ರಾಕ್ಟರ್, ಲಾರಿಗಳನ್ನು ಬಳಸಿ ಮಣ್ಣು ಕೊಂಡೊಯ್ದು ಬೇರೆಡೆ ಹಾಕಲಾಗುತ್ತಿದೆ. ಕೆಲಸಗಾರರು ಕೂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ರಸ್ತೆಯ ಎರಡು ಬದಿಯನ್ನು ಸ್ವಚ್ಛಗೊಳಿಸಲಾಗುತ್ತಿದೆ.

Shimoga Kachinakatte Road Cleaning

ಗುಂಡಿಗಳ ಬಾಯಿ ಬಂದ್

ಡಬಲ್ ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಬಾಯ್ತೆರೆದಿದ್ದವು. ಸಂತೆ ಕಡೂರಿನಿಂದ ಮಂಡೇನಕೊಪ್ಪವರೆಗೆ ಹಲವು ಗುಂಡಿಗಳಿದ್ದವು. ಇವುಗಳ ಕಾರಣಕ್ಕೆ ಅನೇಕ ಅಪಘಾತಗಳು ಸಂಭವಿಸಿದ್ದವು. ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಈ ಗುಂಡಿಗಳ ಬಾಯಿ ಬಂದ್ ಮಾಡಲಾಗಿದೆ. ಸಂತೆ ಕಡೂರಿನಿಂದ ಕಾಚಿನಕಟ್ಟೆವರೆಗೆ ಡಾಂಬರ್ ಹಾಕಲಾಗಿದೆ. ಸದ್ಯ ಈ ರಸ್ತೆ ವಿಮಾನ ನಿಲ್ದಾಣದ ರನ್ ವೇ (Run Way) ಮಾದರಿಯಲ್ಲೇ ಕಂಗೊಳಿಸುತ್ತಿದೆ.

ಅಧಿಕಾರಿಗಳು, ರಾಜಕಾರಣಿಗಳ ನಿತ್ಯ ಸಂಚಾರ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ ಶಿವಮೊಗ್ಗ – ಕಾಚಿನಕಟ್ಟೆ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಹಿಂದೆಂದೂ ಈ ರಸ್ತೆಗೆ ಬಾರದ ಅಧಿಕಾರಿಗಳೆ ಈಗ ನಿತ್ಯ ವಿಮಾನ ನಿಲ್ದಾಣಕ್ಕೆ ದಾಂಗುಡಿ ಇಡುತ್ತಿದ್ದಾರೆ. ಹಗಲು – ರಾತ್ರಿ ಪೊಲೀಸ್ ವಾಹನಗಳು ಸಂಚರಿಸುತ್ತಿವೆ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಸಂಸದರು, ಶಾಸಕರ ಕಾರುಗಳು ದಿನಕ್ಕೊಮ್ಮೆಯಾದರೂ ಈ ರಸ್ತೆಯಲ್ಲಿ ಕಾಣಿಸುತ್ತಿವೆ.

Shimoga Kachinakatte Road Cleaning

ಬಿ.ಹೆಚ್.ರಸ್ತೆಯಲ್ಲಿ ಲೊಡ್ ಗಟ್ಟಲೆ ಮಣ್ಣು

ಎಂ.ಆರ್.ಎಸ್ ಸರ್ಕಲ್ ನಿಂದ ಹೊಳೆ ಬಸ್ ನಿಲ್ದಾಣದವರೆಗೆ ಬಿ.ಹೆಚ್.ರಸ್ತೆಗು ಹೊಸ ಕಳೆ ಬರುತ್ತಿದೆ. ನಿರ್ಮಾಣವಾದಾಗಿನಿಂದ ಒಮ್ಮೆಯೂ ರಸ್ತೆ ಪಕ್ಕ ಮತ್ತು ಡಿವೈಡರ್ ಮೇಲಿದ್ದ ಮಣ್ಣು ತೆಗೆದಿರಲಿಲ್ಲ. ಕಳೆದ ಒಂದು ವಾರದಿಂದ ರಸ್ತೆ ಸ್ವಚ್ಛವಾಗುತ್ತಿದೆ. ಲೋಡ್ ಗಟ್ಟಲೆ ಮಣ್ಣು ತೆಗೆದು ಬೇರೆಡೆ ಕೊಂಡೊಯ್ದು ಹಾಕಲಾಗುತ್ತಿದೆ. ಅಪಘಾತಗಳು ಸಂಭವಿಸಿದಾಗಲೂ ಮುಚ್ಚದೆ ಇದ್ದ ಗುಂಡಿಗಳಿಗೆ ಸದ್ಯದಲ್ಲೇ ಶಾಸ್ತಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ – ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ

ವಿಮಾನ ನಿಲ್ದಾಣದಿಂದಾಗಿ ಶಿವಮೊಗ್ಗದ ಬಿ.ಹೆಚ್.ರಸ್ತೆ ಮತ್ತು ಕಾಚಿನಕಟ್ಟೆ ರಸ್ತೆಯಲ್ಲಿ ನಿತ್ಯ ಸಂಚರಿಸುತ್ತಿರುವವರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಿರಿಯ ರಾಜಕಾರಣಿಗಳು ಆಗಾಗ ಈ ರಸ್ತೆಯಲ್ಲಿ ಸಂಚರಿಸುವಂತಾಗಲಿ ಎಂದು ಜನರು ಪ್ರಾರ್ಥಿಸುತ್ತಿದ್ದಾರೆ.

JNNCE College Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment