ಪ್ರಧಾನಿ ಮೋದಿ ಬಂದರೂ ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಪರದಾಡಿದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 FEBRURARY 2023

SHIMOGA : ವಿಮಾನ ನಿಲ್ದಾಣ ಉದ್ಘಾಟನೆ (Airport Programme) ಸಮಾರಂಭಕ್ಕೆ ಆಗಮಿಸಿದ್ದ ಜನರು ಕಾರ್ಯಕ್ರಮಕ್ಕೂ ತೆರಳಲಾಗದೆ, ಹಿಂದಕ್ಕೆ ಮರಳಲಾಗದೆ ಪರದಾಡಿದರು. ಬಿರು ಬಿಸಿಲಿನಲ್ಲಿ ಪರದಾಡುತ್ತ, ನೀರು, ತಿಂಡಿಗಾಗಿ ಪರಿತಪಿಸಬೇಕಾಯಿತು.

BJP-Workers-March-towards-Shimoga-Airport

ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಸಂಚಾರ ದಟ್ಟಣೆಯಿಂದಾಗಿ ಕಾರ್ಯಕ್ರಮದ (Airport Programme) ಸ್ಥಳಕ್ಕೆ ತಲುಪಲಾಗದೆ ಸಂಕಷ್ಟಕ್ಕೀಡಾದರು.

ಬಸ್ಸು, ಕಾರು, ಟಿಟಿ ವಾಹನಗಳು

ಜನರನ್ನು ಕರೆತರಲು ದೊಡ್ಡ ಸಂಖ್ಯೆಯಲ್ಲಿ ವಾಹನದ ವ್ಯವಸ್ಥೆ ಮಾಡಲಾಗಿತ್ತು. ನೂರಾರು KSRTC ಬಸ್ಸುಗಳು, ಖಾಸಗಿ ಬಸ್ಸುಗಳು, ಟಿಟಿ ವಾಹನಗಳು, ಕಾರು ಸೇರಿದಂತೆ ಹಲವು ವಾಹನಗಳ ವ್ಯವಸ್ಥೆಯಾಗಿತ್ತು. ಹಳ್ಳಿ ಹಳ್ಳಿಯಿಂದಲು ಜನರನ್ನು ಕರೆಯಿಸಲಾಗಿದೆ.

Shimoga Traffic Due to Airport Inauguration

ಬಿರು ಬಿಸಿಲಲ್ಲಿ, ನಡು ರಸ್ತೆಯಲ್ಲಿ

ಟ್ರಾಫಿಕ್ ಜಾಮ್ ಉಂಟಾಗಿದ್ದರಿಂದ ವಾಹನಗಳು ನಡು ರಸ್ತೆಯಲ್ಲೆ ನಿಂತಿದ್ದವು. ಬಿರು ಬಿಸಿಲಿನಲ್ಲಿ ಬಹು ಹೊತ್ತು ವಾಹನಗಳಲ್ಲೇ ಕಳೆದ ಜನರು ಹೈರಾಣಾದರು. ವಿಮಾನ ನಿಲ್ದಾಣ ಕಣ್ತುಂಬಿಕೊಳ್ಳಬೇಕು, ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಬೇಕು ಎಂಬ ಉತ್ಸಾಹವು ಅಡಗಿ ಹೋಗಿತ್ತು.

‘ಶಿಕಾರಿಪುರದ ತರಲಘಟ್ಟದಿಂದ ಬಂದಿದ್ದೇವೆ. ನಾವು ವಿಮಾನ ನಿಲ್ದಾಣ ನೋಡಬೇಕು. ಮೋದಿ ಅವರು ಬಂದಿದ್ದಾರೆ. ಅವರನ್ನು ನೋಡಬೇಕು ಅಂತಾ ಬಂದಿದ್ದೇವೆ. ಆದರೆ ಟ್ರಾಫಿಕ್ ನಿಂದಾಗಿ ಸುಸ್ತಾಗಿದ್ದೇವೆ. ಇನ್ನು ಎಷ್ಟೊತ್ತು ಕಾಯಬೇಕೋ ಗೊತ್ತಾಗುತ್ತಿಲ್ಲ’ ಅನ್ನುತ್ತಾ ಸಂಚಾರ ದಟ್ಟಣೆ ಬಗ್ಗೆ ಅಸಮಾಧಾನ ಹೊರ ಹಾಕಿದರು ಬಸ್ಸಿನಲ್ಲಿದ್ದ ಮಹಿಳೆ.

ಇದನ್ನೂ ಓದಿ –  ಶಿವಮೊಗ್ಗದ ಕೆಲವು ಗ್ರಾಮ, ಬಡಾವಣೆಗಳಿಗೆ ದಿಗ್ಭಂದನದ ಅನುಭವ, ಹಿಡಿಶಾಪ ಹಾಕುತ್ತ ನಡೆದ ಜನ

ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ಬಸ್ಸಿನಲ್ಲಿದ್ದವರಿಗೆ ನೀರು, ತಿಂಡಿ ಪೂರೈಕೆ ಮಾಡಿದರು. ಬಹುತೇಕ ಜನರಿಗೆ ಇದಾವುದು ಸಿಗದೆ, ಬಸ್ಸು ನಿಂತಲ್ಲೇ ಅಕ್ಕಪಕ್ಕದ ಅಂಗಡಿಗಳಿಗೆ ಹೋಗಿ ನೀರು, ಬಸ್ಕತ್ತು, ತಿಂಡಿ ತಂದು ಹಸಿವು ನೀಗಿಸಿಕೊಂಡರು.

ನಡೆದು ಹೊರಟ ಯುವಕರು

ಇನ್ನು, ಬಹು ಹೊತ್ತು ಸಂಚಾರ ದಟ್ಟಣೆಯಿಂದ ಕಂಗೆಟ್ಟಿದ್ದ ಯುವಕರು, ತಾವು ಬಂದಿದ್ದ ವಾಹನಗಳಿಂದ ಕೆಳಗಿಳಿದು ಕಾರ್ಯಕ್ರಮದ ಸ್ಥಳದವರೆಗೆ ನಡೆದು ಸಾಗಿದರು. ಬಿಜೆಪಿ ಪಕ್ಷದ ಧ್ವಜಗಳನ್ನು ಹಿಡಿದು ಬೈಪಾಸ್ ರಸ್ತೆ, ವಿದ್ಯಾನಗರ ಸೇರಿದಂತೆ ವಿವಿಧೆಡೆಯಿಂದ ನಡೆದುಕೊಂಡೇ ವಿಮಾನ ನಿಲ್ದಾಣದವರೆಗೆ ತೆರಳಿದರು.

ಇದನ್ನೂ ಓದಿ – ಶಿವಮೊಗ್ಗ ನಗರದಾದ್ಯಂತ ಫುಲ್ ಟ್ರಾಫಿಕ್ ಜಾಮ್, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ರಿಪೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ, ಭಾಷಣ ಆರಂಭಿಸಿದರೂ ಹಲವರು ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಪರದಾಡಿದರು.

JNNCE College Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 27, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment