ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 FEBRUARY 2023
BHADRAVATHI : ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲು ಅವಕಾಶ ಕಲ್ಪಿಸದ ಸ್ಥಳೀಯ ರಾಜಕಾರಣಿಗಳ ವಿರುದ್ಧ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯಲ್ಲಿ ಅಣಕು ಶವಯಾತ್ರೆ (Effigy) ಕೈಗೊಂಡು ಪ್ರತಿಭಟನೆ ನಡೆಸಿದರು.

ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಕಳೆದ ರಾತ್ರಿ ಅಣಕು ಶವಯಾತ್ರೆ ನಡೆಸಲಾಯಿತು. ಬಿಜೆಪಿ ಸರ್ಕಾರ ಮತ್ತು ಮುಖಂಡರ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಬಳಿಕ ನಡುರಸ್ತೆಯಲ್ಲೆ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ – ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ಪ್ರತಿಕೃತಿಗಳನ್ನು (Effigy) ವಿಐಎಸ್ಎಲ್ ನೌಕರರು ದಹಿಸಿದರು. ನಗರದ ವಿವಿಧೆಡೆ ಮೆರವಣಿಗೆ ನಡೆಸಿದ ಕಾರ್ಮಿಕರು, ಘೋಷಣೆ ಕೂಗಿದರು. ವಿಐಎಸ್ಎಲ್ ನೌಕರರಿಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



