ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MARCH 2023
SORABA : ಕೊರಳಲ್ಲಿರುವ ಚಿನ್ನದ ಸರವನ್ನು ಫಳಫಳ ಹೊಳೆಯುವಂತೆ ಮಾಡಿಕೊಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ವಂಚಿಸಲಾಗಿದೆ. ಸೊರಬ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಾಧಮ್ಮ ಎಂಬುವವರ ಚಿನ್ನಾಭರಣವನ್ನು (ornaments) ಕಳ್ಳತನ ಮಾಡಲಾಗಿದೆ.
ಹೇಗಾಯ್ತು ಘಟನೆ?
ರಾಧಮ್ಮ ಎಂಬುವವರ ಮನೆ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನಾಭರಣಕ್ಕೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಕೊರಳಲ್ಲಿದ್ದ 20 ಗ್ರಾಂ ತೂಕದ ಬಂಗಾರದ ಚೈನ್, 40 ಗ್ರಾಂ ತೂಕದ ಲಕ್ಷ್ಮಿ ತಾಳಿಸರ ಮತ್ತು ಚೈನ್ ಬಿಚ್ಚಿಸಿಕೊಂಡಿದ್ದಾರೆ. ಕುಕ್ಕರ್, ನೀರು ಮತ್ತು ಅರಿಶಿಣ ತರುವಂತೆ ರಾಧಮ್ಮ ಅವರಿಗೆ ಅಪರಿಚಿತರು ತಿಳಿಸಿದರು.

ರಾಧಮ್ಮ ಅವರು ಸ್ಟೀಲ್ ಡಬ್ಬಿ ತಂದು ಕೊಟ್ಟಿದ್ದು, ಅದರೊಳಗೆ ಚಿನ್ನದ ಸರಗಳನ್ನು ಹಾಕುವಂತೆ ನಟಿಸಿ, ಇದನ್ನು ಸ್ವಲ್ಪ ಹೊತ್ತು ಬಿಸಿ ಮಾಡಿ ಎಂದು ಅಪರಿಚಿತರು ತಿಳಿಸಿದರು. ರಾಧಮ್ಮ ಅವರು ಮನೆಯೊಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ತಾವು ತಂದಿದ್ದ ಬೈಕಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅನುಮಾನಗೊಂಡು ಸ್ಟೀಲ್ ಡಬ್ಬಿಯ ಮುಚ್ಚಳ ತೆಗೆದು ನೋಡಿದಾಗ ಸರಗಳು ಇರಲಿಲ್ಲ.
ಪಕ್ಕದ ಮನೆಗೂ ಹೋಗಿದ್ದರು
ವಂಚಕರು ರಾಧಮ್ಮ ಅವರ ಪಕ್ಕದ ಮನೆಗೂ ತೆರಳಿದ್ದರು. ಆದರೆ ಅವರು ಪಾಲಿಶ್ ಬೇಕಿಲ್ಲ ಎಂದು ಅವರನ್ನು ಸಾಗಹಾಕಿದ್ದರು. ಘಟನೆ ಕುರಿತು ರಾಧಮ್ಮ ಅವರು ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ
ಹೋಂಡಾ ಶೈನ್ ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ತಮ್ಮನ್ನು ವಂಚಿಸಿ 2.10 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು (ornaments) ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













