ಶುಂಠಿ ಬೆಳೆ ಮಧ್ಯೆ ಗಾಂಜಾ ಬೆಳೆದವನಿಗೆ ಶಿವಮೊಗ್ಗ ಕೋರ್ಟ್’ನಿಂದ ಕಠಿಣ ಶಿಕ್ಷೆ, ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 10 ಮೇ 2019

ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿದ್ದನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿದೆ.

ಶಿಕಾರಿಪುರದ ಹುಣಸೆಕಟ್ಟೆಯ ತಾಳಗುಪ್ಪದವರ ಮನೆ ಈಶ್ವರ (44) ಶಿಕ್ಷೆಗೊಳಗಾದ ವ್ಯಕ್ತಿ. ಗುಡ್ಡದ ಹೊಸಳ್ಳಿಯ ತನ್ನ ಜಮೀನಿನಲ್ಲಿ ಶುಂಠಿ ಬೆಳೆ ಮಧ್ಯದಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಶಿಕಾರಿಪುರದ ಡಿವೈಎಸ್’ಪಿ ಸುಧಾಕರ್.ಎಸ್.ನಾಯಕ್ ಮತ್ತು ಸಿಬ್ಬಂದಿ ದಾಳಿ ಮಾಡಿ, 71 ಸಾವಿರ ಮೌಲ್ಯದ 37 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದರು.

ತಾಳಗುಪ್ಪದವರ ಮನೆ ಈಶ್ವರ ವಿರುದ್ಧ ದೋಷಾರೋಪ ಪಟ್ಟು ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ್ ಅವರು, ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ.ಯಳಗೇರಿ ವಾದಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment