SHIVAMOGGA LIVE NEWS | 16 MARCH 2023
SHIMOGA : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮಾರ್ಚ್ 18ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಲಿದ್ದು, ವಾಸ್ತವ್ಯ ಮಾಡಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಜನರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮಸ್ಥರು ಮುಂಚಿತವಾಗಿ ತಮ್ಮ ಅಹವಾಲುಗಳನ್ನು ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್. ಬಿರಾದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೈಸೂರಿನಲ್ಲೂ VISL ಪರ ಧರಣಿ, ರಾಜ ಮನೆತನದ ಗಮನ ಸೆಳೆಯಲು ಯತ್ನ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200