ಗುಂಡು ತಗುಲಿ ರಿಪ್ಪನ್ ಪೇಟೆ ಮೂಲದ ಯೋಧ ಮಣಿಪುರದಲ್ಲಿ ನಿಧನ, ಮನೆಗೆ ಮಾಜಿ ಶಾಸಕ ಭೇಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 MARCH 2023

RIPPONPETE : ಅಸ್ಸಾಂ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರಿಪ್ಪನ್ ಪೇಟೆಯ ಯೋಧ (Soldier) ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ವಿಚಾರ ತಿಳಿದು ಅವರ ರಿಪ್ಪನ್ ಪೇಟೆಯಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Assam-Rifiles-personal-sandeep-dies-on-duty

ಸಂದೀಪ್.ಹೆಚ್ (27) ಮೃತ ಯೋಧ (Soldier). ಮಣಿಪುರದ ಇಂಫಾಲದಲ್ಲಿರುವ ಅಸ್ಸಾಂ ರೈಫಲ್ಸ್ ನ ಕಾಲಾ ಕ್ಯಾಂಪ್ ನಲ್ಲಿ ಸಂದೀಪ್ ಸೆಂಟ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಗುಂಡು ಹಾರಿ ಸಂದೀಪ್ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮರಣೋತ್ತರ ಪರೀಕ್ಷೆಗೆ ಸಿದ್ಧತೆ

ಇಂದು ಬೆಳಗಿನ ಜಾವ ಸಂದೀಪ್ ಅವರ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ವೈದ್ಯಕೀಯ ಪರಿಕ್ಷೆಗೆ ಒಳಪಡಿಸಲಾಗಿದ್ದು, ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾಗಿ ಮಣಿಪುರದ ನಾರ್ಥ್ ಈಸ್ಟ್ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಂಫಾಲದ ಜವಾಹರಲಾಲ್ ನೆಹರು ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸಂಸ್ಥೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಸಂದೀಪ್ ಅವರ ಪಾರ್ಥೀವ ಶರಿರವನ್ನು ಇರಿಸಲಾಗಿದೆ ಎಂದು ವರದಿಯಾಗಿದೆ.

ರಿಪ್ಪನ್ ಪೇಟೆ ಮೂಲದ ಯೋಧ

ಸಂದೀಪ್ ಅವರು ರಿಪ್ಪನ್ ಪೇಟೆಯ ಶಬರೀಶ್ ನಗರದವರು. ಅವರು ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಂದೀಪ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

‘ಸಂದೀಪ್ ಅಕಾಲಿಕ ನಿಧನ ರಾಷ್ಟ್ರಕ್ಕೆ ನಷ್ಟ ಉಂಟಾಗಿದೆ. ಸಂದೀಪ್ ಅವರು ತಮಗೆ ಪರಿಚಿತರು. ಈಚೆಗೆ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅವರನ್ನು ಸನ್ಮಾನಿಸಿದ್ದೆ. ಅವರು ನಿಧನರಾದ ವಿಚಾರ ತಿಳಿದು ನೋವುಂಟಾಗಿದೆ’ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರಿಂದ ದಿಢೀರ್ ದಾಳಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment