ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿದೆ ಛತ್ರಪತಿ ಶಿವಾಜಿ ಪುತ್ಥಳಿ, ಎಲ್ಲಿ? ಯಾವಾಗ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 MARCH 2023

SHIMOGA : ಛತ್ರಪತಿ ಶಿವಾಜಿ ಅವರ 396ನೇ ಜಯಂತಿ ಅಂಗವಾಗಿ ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿರುವ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಶಿವಾಜಿ ಪುತ್ಥಳಿ (Shivaji Statue) ಅನಾವರಣ ಮಾಡಲಾಗುತ್ತಿದೆ ಎಂದು ಅಮೂಲಕ ಶೋಧ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಖಂಡೋಬರಾವ್ ಅವರು ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shivaji-Statue-in-Amulya-Shodha-in-Shimoga

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡೋಬರಾವ್ ಅವರು, ಮಾರ್ಚ್ 24ರಂದು ಬೆಳಗ್ಗೆ 11.45ಕ್ಕೆ ಹಿಂದೂ ರಾಷ್ಟ್ರದ ಸಂರಕ್ಷಕರಾದ ಛತ್ರಪತಿ ಶಿವಾಜಿ ಅವರ ಪುತ್ಥಳಿಯನ್ನು (Shivaji Statue) ಅನಾವರಣ ಮಾಡಲಾಗುತ್ತಿದೆ. ಲಕ್ಕಿನಕೊಪ್ಪದ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರು ಪುತ್ಥಳಿ ಅನಾವರಣ  ಮಾಡಲಿದ್ದಾರೆ ಎಂದರು.

ಪುತ್ಥಳಿಯನ್ನು ದಾನವಾಗಿ ನೀಡಿದ ಬಾಗಲಕೋಟೆಯ ಮಾರುತಿರಾವ್ ಶಿಂಧೆ ಅವರು ಉಪಸ್ಥಿತರಿರಲಿದ್ದಾರೆ. ಮರಾಠ ಅಭಿವೃದ್ಧಿ ನಿಗಮದ ಮಾರುತಿರಾವ್ ಗಣಪತಿರಾವ್ ಶಿಂಧೆ ಅವರು ಶ್ರೀ ಸಾಯಿ ಶಿವಸದನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಖಂಡೋಬರಾವ್ ಅವರು ತಿಳಿಸಿದರು.

Nammur-News-Whatsapp

ನಾಲ್ಕು ತಲೆಮಾರಿನ ಹಿಂದೆ ಮಗರ್ ಕುಟುಂಬದವರು ಕರ್ನಾಟಕಕ್ಕೆ ಬಂದು ನೆಲೆಸಿದ್ದರ ಕುರಿತು ಬರೆದಿರುವ ಮಗರ್ ವಾಹಿನಿ ಪುಸ್ತಕವನ್ನು ಅಂದು ಬಿಡುಗಡೆ ಮಾಡಲಾಗುತ್ತದೆ. ಕೆಕೆಎಂಪಿ ರಾಜ್ಯಾಧ್ಯಕ್ಷ ಸುರೇಶ್ ರಾವ್ ಸಾಠೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ರಂಜಿತ್ ಮಗರ್, ರಮೇಶ್ ಬಾಬು ಜಾಧವ್, ಟಿ.ಆರ್.ಅಶ್ವಥನಾರಾಯಣ,  ಎಸ್.ಬಿ.ಅಶೋಕ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment