ತಲೆ ಮೇಲೆ ಕಲ್ಲು ಹೊತ್ತು ಹಾಕಿ ಪೊಲೀಸ್ ಪೂರ್ಣೇಶ್ ಹತ್ಯೆ ಶಂಕೆ, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MARCH 2023

THIRTHAHALLI : ಮಾರುಕಟ್ಟೆಯಲ್ಲಿ (Market) ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪೂರ್ಣೇಶ್ ಎಂಬುವವರ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗುತ್ತಿದೆ.

Police-Purnesh-Case-thirthahalli-Police-Station

ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ (Market) ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ. ಪೂರ್ಣೇಶ್ ಅವರ ತಲೆ ಮೇಲೆ ಕಲ್ಲು ಹೊತ್ತು ಹಾಕಿರುವ ಶಂಕೆ ಇದೆ. ಮೃತದೇಹದ ಪಕ್ಕದಲ್ಲಿ ದೊಡ್ಡ ಕಲ್ಲು ಇದೆ. ರಕ್ತದ ಮಡುವಿನಲ್ಲಿ ಮೃತದೇಹ ಇರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Shree Refrigeration Shimoga

ಪೂರ್ಣೇಶ್ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ಜೋಗ, ತೀರ್ಥಹಳ್ಳಿ, ಆಗುಂಬೆ, ಮಾಳೂರು ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಮತ್ತೆ ಮುನ್ನಲೆಗೆ ಬಂತು ತೀರ್ಥಹಳ್ಳಿ ನಂದಿತಾ ಕೇಸ್, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಗೆ ಮನವಿ, ಕಾರಣವೇನು?

Ayanuru Manjunatha

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2023

Leave a Comment