SHIVAMOGGA LIVE NEWS | 1 APRIL 2023
BENGALURU : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು.
ಏನಾಯ್ತು ಸಂಧಾನ ಸಭೆ?
ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಈ ವೇಳೆ ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವ ನಿರ್ಧಾಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ. ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕಿಮ್ಮನೆ ರತ್ನಾಕರ್ ಮೊದಲ ರಿಯಾಕ್ಷನ್
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಕಿಮ್ಮನೆ ರತ್ನಾಕರ್ ಅವರು, ‘ಇಬ್ಬರು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರಲಿದೆ. ಆದ್ದರಿಂದ ಇಬ್ಬರು ಒಟ್ಟಾಗಿ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದೇವೆ. ಟಿಕೆಟ್ ವಿಚಾರ ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಬಿಜೆಪಿಯನ್ನ ಸೋಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಬೆಂಗಳೂರಿಗೆ ದೌಡು, ಯಾಕೆ? ಯಾರನ್ನೆಲ್ಲ ಭೇಟಿಯಾದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200