ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 7 APRIL 2023

SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Shikaripura-Hucharaya-Swamy-Brahma-Ratotsava

ಬೆಳಗಿನ ಜಾವದಿಂದಲೆ ಭಕ್ತ ಸಾಗರ

ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.  ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ ವೇದ ಘೋಷ, ವಾದ್ಯ ನುಡಿಸಲಾಯಿತು.

ರಾಜ್ಯದ ವಿವಿಧೆಡೆಯಿಂದ ಭಕ್ತರು

ಶ್ರೀ ಹುಚ್ಚರಾಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ವೇಳೆ ಪೂಜೆ ಸಲ್ಲಿಸಿ, ಸ್ವಾಮಿಗೆ ಹರಕೆ ಹೊತ್ತುಕೊಂಡರು. ರಥ ಬೀದಿಯಲ್ಲಿ ತುಂಬೆಲ್ಲ ಜನರು ನಿಂತು ರಥೋತ್ಸವವನ್ನು ಕಣ್ತುಂಬಿಕೊಂಡರು.

Creative Gift

ಯಡಿಯೂರಪ್ಪ ಕುಟುಂಬ ಭಾಗಿ

ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರು ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರು ರಥೋತ್ಸವದಲ್ಲಿ ಕುಟುಂಬ ಸಹಿತ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್ ಸೇರಿದಂದ ವಿವಿಧ ರಾಜಕೀಯ ಮುಖಂಡರು ಕುಟುಂಬ ಸಹಿತ ರಥೋತ್ಸವದಲ್ಲಿ ಭಾಗಿಯಾಗಿ, ದೇವರ ಪೂಜೆ ಸಲ್ಲಿಸಿದರು.

BY Vijayendra and Raghavendra family at Hucharaya swamy temple

ಸ್ವಯಂ ಸೇವೆ, ಬಿಗಿ ಭದ್ರತೆ

ರಥೋತ್ಸವದ ಹಿನ್ನೆಲೆ ನೂರಾರು ಯುವಕರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಜನರು ನೀರು, ತಿಂಡಿ, ತಿನಿಸು ವಿತರಿಸಿದರು. ಇನ್ನು, ರಥೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಇವತ್ತು ರಾತ್ರಿ ಶಿಕಾರಿಪುರದಲ್ಲಿ ತೆಪ್ಪೋತ್ಸವ ನಡೆಯಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment