| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 7 APRIL 2023
SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
![]()
ಬೆಳಗಿನ ಜಾವದಿಂದಲೆ ಭಕ್ತ ಸಾಗರ
ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು. ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ ವೇದ ಘೋಷ, ವಾದ್ಯ ನುಡಿಸಲಾಯಿತು.
ರಾಜ್ಯದ ವಿವಿಧೆಡೆಯಿಂದ ಭಕ್ತರು
ಶ್ರೀ ಹುಚ್ಚರಾಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ವೇಳೆ ಪೂಜೆ ಸಲ್ಲಿಸಿ, ಸ್ವಾಮಿಗೆ ಹರಕೆ ಹೊತ್ತುಕೊಂಡರು. ರಥ ಬೀದಿಯಲ್ಲಿ ತುಂಬೆಲ್ಲ ಜನರು ನಿಂತು ರಥೋತ್ಸವವನ್ನು ಕಣ್ತುಂಬಿಕೊಂಡರು.

ಯಡಿಯೂರಪ್ಪ ಕುಟುಂಬ ಭಾಗಿ
ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರು ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರು ರಥೋತ್ಸವದಲ್ಲಿ ಕುಟುಂಬ ಸಹಿತ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್ ಸೇರಿದಂದ ವಿವಿಧ ರಾಜಕೀಯ ಮುಖಂಡರು ಕುಟುಂಬ ಸಹಿತ ರಥೋತ್ಸವದಲ್ಲಿ ಭಾಗಿಯಾಗಿ, ದೇವರ ಪೂಜೆ ಸಲ್ಲಿಸಿದರು.

ಸ್ವಯಂ ಸೇವೆ, ಬಿಗಿ ಭದ್ರತೆ
ರಥೋತ್ಸವದ ಹಿನ್ನೆಲೆ ನೂರಾರು ಯುವಕರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಜನರು ನೀರು, ತಿಂಡಿ, ತಿನಿಸು ವಿತರಿಸಿದರು. ಇನ್ನು, ರಥೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಇವತ್ತು ರಾತ್ರಿ ಶಿಕಾರಿಪುರದಲ್ಲಿ ತೆಪ್ಪೋತ್ಸವ ನಡೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()