ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 APRIL 2023
SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಬೆಳಗಿನ ಜಾವದಿಂದಲೆ ಭಕ್ತ ಸಾಗರ
ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು. ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ ವೇದ ಘೋಷ, ವಾದ್ಯ ನುಡಿಸಲಾಯಿತು.
ರಾಜ್ಯದ ವಿವಿಧೆಡೆಯಿಂದ ಭಕ್ತರು
ಶ್ರೀ ಹುಚ್ಚರಾಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ವೇಳೆ ಪೂಜೆ ಸಲ್ಲಿಸಿ, ಸ್ವಾಮಿಗೆ ಹರಕೆ ಹೊತ್ತುಕೊಂಡರು. ರಥ ಬೀದಿಯಲ್ಲಿ ತುಂಬೆಲ್ಲ ಜನರು ನಿಂತು ರಥೋತ್ಸವವನ್ನು ಕಣ್ತುಂಬಿಕೊಂಡರು.

ಯಡಿಯೂರಪ್ಪ ಕುಟುಂಬ ಭಾಗಿ
ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರು ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರು ರಥೋತ್ಸವದಲ್ಲಿ ಕುಟುಂಬ ಸಹಿತ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್ ಸೇರಿದಂದ ವಿವಿಧ ರಾಜಕೀಯ ಮುಖಂಡರು ಕುಟುಂಬ ಸಹಿತ ರಥೋತ್ಸವದಲ್ಲಿ ಭಾಗಿಯಾಗಿ, ದೇವರ ಪೂಜೆ ಸಲ್ಲಿಸಿದರು.

ಸ್ವಯಂ ಸೇವೆ, ಬಿಗಿ ಭದ್ರತೆ
ರಥೋತ್ಸವದ ಹಿನ್ನೆಲೆ ನೂರಾರು ಯುವಕರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಜನರು ನೀರು, ತಿಂಡಿ, ತಿನಿಸು ವಿತರಿಸಿದರು. ಇನ್ನು, ರಥೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಇವತ್ತು ರಾತ್ರಿ ಶಿಕಾರಿಪುರದಲ್ಲಿ ತೆಪ್ಪೋತ್ಸವ ನಡೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













