SHIVAMOGGA LIVE NEWS | 8 APRIL 2023
BHADRAVATHI : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Raid) ನಡೆಸಿ ಮೂವರನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ರಸ್ತೆಯ ಲಕ್ಷ್ಮಿ ಸಾಮಿಲ್ ಬಳಿ ದಾಳಿ ನಡೆಸಲಾಯಿತು.
ಸೀಗೆಬಾಗಿಯ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ ಅಲಿಯಾಸ್ ಟಕ್ಕರ್ (24), ಭದ್ರಾ ಕಾಲೋನಿಯ ಮಂಜುನಾಥ್ ಅಲಿಯಾಸ್ ಕ್ಯಾತೆ (27) ಬಂಧಿತರು. ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ಒಣ ಗಾಂಜಾ, 690 ರೂ. ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ