ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 APRIL 2023
ANAVATTI : ಸಾಲ ಬಾಧೆ, ಅಡಕೆ ತೋಟ ಒಣಗುತ್ತಿದ್ದದ್ದನ್ನು ಕಂಡು ಮನನೊಂದಿದ್ದ ರೈತರೊಬ್ಬರು ಜಮೀನು ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕಾತುವಳ್ಳಿ ಗ್ರಾಮದ ರೈತ (Farmer) ಮಲ್ಲಿಕಾರ್ಜುನ ಗೌಡ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ತೋಟದಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿತ್ತು. ವಿದ್ಯುತ್ ಸ್ಥಗಿತದಿಂದಾಗಿ ಕೊಳವೆ ಬಾವಿಯಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಮೇಲೆತ್ತಿ ತೋಟಕ್ಕೆ ಹಾಯಿಸಲು ಆಗುತ್ತಿರಲಿಲ್ಲ. ಇದರಿಂದ ತೋಟ ಒಣಗುತ್ತಿದೆ ಎಂದು ಮನನೊಂದಿದ್ದರು. ಸಹಕಾರ ಸಂಘ ಮತ್ತು ಕೈ ಸಾಲ ಮಾಡಿಕೊಂಡಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ –ಶಿವಮೊಗ್ಗ ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ ಸಾವು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



