ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 APRIL 2023
SHIMOGA : ರಾಷ್ಟ್ರೀಯ ಹೆದ್ದಾರಿ ಬದಿಯ ಆಲದ ಮರದ ಕೆಳಗೆ ವಾಮಾಚಾರ (Black Magic) ಮಾಡಲಾಗಿದೆ. ವಾಮಾಚಾರಕ್ಕೆ ಬಳಸಿದ ವಸ್ತುಗಳು ಮತ್ತು ಜೀವಂತ ಕುರಿ ಪತ್ತೆಯಾಗಿದೆ. ವಿಧಾನಸಭೆ ಚುನಾವಣೆ ಕಾರಣಕ್ಕೆ ವಾಮಾಚಾರ ನಡೆಸಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಚರ್ಚೆಗೆ ಹುಟ್ಟುಹಾಕಿದೆ.

ಶಿವಮೊಗ್ಗ – ಸಾಗರ ರಸ್ತೆಯ ಮುದ್ದಿನಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಆಲದ ಮರದ ಕೆಳಗೆ ವಾಮಾಚಾರ (Black Magic) ನಡೆಸಲಾಗಿದೆ. ಮಡಕೆಗಳು, ಅನ್ನ, ಬಿದಿರಿನ ಮರ, ಬುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಶಿಣ, ಕುಂಕುಮ, ಗೊಂಬೆ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಮರದ ಪಕ್ಕದಲ್ಲಿ ಜೀವಂತ ಕುರಿಯನ್ನು ಕಟ್ಟಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ಜೀರೋ ಟ್ರಾಫಿಕ್ನಲ್ಲಿ ವಿಶೇಷ ಆಂಬುಲೆನ್ಸ್ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ವಾಮಾಚಾರದ ವಿಷಯ ತಿಳಿದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



