ಚುನಾವಣೆ ಹೊತ್ತಲ್ಲಿ ಕುತೂಹಲ ಮೂಡಿಸಿದ ಹರಿಗೆ ಕಾರ್ಪೊರೇಟರ್‌ ನಡೆ, ಪಕ್ಷದ ಜವಾಬ್ದಾರಿಗೆ ಗುಡ್‌ ಬೈ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2023

SHIMOGA : ಹರಿಗೆಯ ಮಹಾನಗರ ಪಾಲಿಕೆ ಸದಸ್ಯ ಆರ್.ಎಸ್.ಸತ್ಯನಾರಾಯಣ ಅವರು ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

Harige-Corporator-Resigns-from-JDS-Position.j

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಸ್.ಸತ್ಯನಾರಾಯಣ, ಜೆಡಿಎಸ್‌ ಪಕ್ಷ ನನಗೆ ಪಾಲಿಕೆ ಸದಸ್ಯನಾಗುವ ಅವಕಾಶ ಕಲ್ಪಿಸಿದೆ. ಈಗ ಪಕ್ಷದ ಅಭ್ಯರ್ಥಿ ಶಿವಮೊಗ್ಗದಲ್ಲಿ ಶಾಂತಿ ನೆಲಸಬೇಕು ಎಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕೆ ತಮ್ಮ ಅಪಸ್ವರವಿಲ್ಲ. ಆದರೆ ವೈಯಕ್ತಿಕ ಕಾರಣಕ್ಕೆ ಪಕ್ಷದ ಜವಾಬ್ದಾರಿಗೆ ರಾಜೀನಾಮೆ (Resignation) ನೀಡಿ, ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ ಎಂದರು.

ಇದನ್ನೂ ಓದಿ – ಶಿವಮೊಗ್ಗ ಚುನಾವಣೆ, ಗೆಲುವಿಗೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಲೆಕ್ಕಾಚಾರ ಹೇಗಿದೆ?

ಕೆಲವು ತಿಂಗಳ ಹಿಂದ ಪ್ರಜಾಧ್ವನಿ ಹೆಸರಿನಲ್ಲಿ ಸಂಘಟನೆ ಆರಂಭಿಸಿದ್ದೆ. ಮೇ 1ರಂದು ಇದೇ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕ ದಿನಾಚಾರಣೆ ಕಾರ್ಯಕ್ರಮ ನಡೆಸಲಾಗುತ್ತದೆ. ಆ ಬಳಿಕ ಪ್ರಮುಖರೊಂದಿಗೆ ಚರ್ಚೆ ನಡೆಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಸುವುದಾಗಿ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment