ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 APRIL 2023
SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ಎರಡು ವಿಶೇಷ ವಿಮಾನ
ರಾಹುಲ್ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್ ಗಾಂಧಿ ಮತ್ತು ಅವರ ಭದ್ರತಾ ಸಿಬ್ಬಂದಿ, ಕಚೇರಿ ಸಿಬ್ಬಂದಿ ಪ್ರತ್ಯೇಕ ವಿಮಾನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಸ್ವಾಗತ, ಚರ್ಚೆ, ಸಲಹೆ
ರಾಹುಲ್ ಗಾಂಧಿ ಅವರ ಭೇಟಿಗೆ ಶಿವಮೊಗ್ಗ ಕಾಂಗ್ರೆಸ್ನಿಂದ 135 ಮುಖಂಡರಿಗೆ ಅವಕಾಶವಿತ್ತು. ಕೊನೆಗೆ 30 ಮಂದಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಕಾಂಗ್ರೆಸ್ನ ಎಲ್ಲಾ ವಿಭಾಗದ ಪ್ರಮುಖರನ್ನು ಭೇಟಿಯಾದ ರಾಹುಲ್ ಗಾಂಧಿ ಅವರು, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಬೇಕು ಎಂದು ಸಲಹೆ ನೀಡಿದರು.
ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕ ಸಭೆ
ಇನ್ನು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಜೊತೆಗೆ ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಶಿವಮೊಗ್ಗ ಕ್ಷೇತ್ರದ ಹೆಚ್.ಸಿ.ಯೋಗೇಶ್, ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್, ಭದ್ರಾವತಿಯ ಬಿ.ಕೆ.ಸಂಗಮೇಶ್ವರ್, ಸಾಗರದ ಬೇಳೂರು ಗೋಪಾಲಕೃಷ್ಣ, ಶಿಕಾರಿಪುರದ ಮಾಲ್ತೇಶ್, ಶಿವಮೊಗ್ಗ ಗ್ರಾಮಾಂತರದ ಡಾ.ಶ್ರೀನಿವಾಸ ಕರಿಯಣ್ಣ ಅವರ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕ ಮಂಜುನಾಥ ಗೌಡ ಸೇರಿದಂತೆ ಕೆಲವು ಪ್ರಮುಖರು ಇದ್ದರು.

ಸೊರಬ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಉಡುಪಿ ಉಸ್ತುವಾರಿ ಆಗಿರುವುದರಿಂದ ರಾಹುಲ್ ಗಾಂಧಿ ಭೇಟಿ ವೇಳೆ ಅವರು ಇರಲಿಲ್ಲ.
ಇದನ್ನೂ ಓದಿ – ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ
ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗಕ್ಕೆ ಬರಲಿಲ್ಲ. ಮುಖಂಡರ ಜೊತೆ ಸಭೆ ಬಳಿಕ ರಾಹುಲ್ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಿದರು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















