ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 APRIL 2023
SORABA : ಪುರಸಭೆ ವ್ಯಾಪ್ತಿಯಲ್ಲಿ ಚಿರತೆ (Cheetah) ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನರು ಒಬ್ಬೊಬ್ಬರೆ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಸೊರಬದ ಚಿಕ್ಕಶಕುನ ಮತ್ತು ಸೀಗೆಹಳ್ಳಿ ಗ್ರಾಮಗಳಲ್ಲಿ ಕಳೆದ ಮೂರು ದಿನದಿಂದ ಚಿರತೆ (Cheetah) ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರು ಜಮೀನಿಗೆ ಹೋಗಲು ಹೆದರುವಂತಾಗಿದೆ. ಇನ್ನು, ಈ ಕುರಿತು ವಲಯ ಅರಣ್ಯಾಧಿಕಾರಿ ಜಾವೇದ್ ಬಾಷಾ ಅವರು ಜನರಿಗೆ ಎಚ್ಚರಿಕೆ ನೀಡಿದ್ದು, ಜನರು ಒಬ್ಬೊಂಟಿಯಾಗಿ ಓಡಾಡಬಾರದು. ಚಿರತೆ ಕಾಣಿಸಕೊಂಡರೆ ಕೂಡಲೆ ತಿಳಿಸಬೇಕು. ಅಲ್ಲದೆ ಅತ್ಯಾಧುನಿಕ ಬೋನ್ ಇದ್ದು, ಚಿರತೆ ಸೆರೆ ಹಿಡಿಯಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

LATEST NEWS
- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















