ಗೌರಿ ಇನ್ನಿಲ್ಲ, ಶಿವಮೊಗ್ಗ ಪೊಲೀಸ್‌ ಇಲಾಖೆಯಿಂದ ಗೌರವ ನಮನ, ಯಾರಿದು ಗೌರಿ? ಈಕೆಯ ಹಿರಿಮೆ ಏನು?

SHIVAMOGGA LIVE NEWS | 10 MAY 2023

SHIMOGA : ಪೊಲೀಸ್‌ ಇಲಾಖೆಯ ಅಪರಾಧ ಪತ್ತೆ ದಳದ ಪ್ರಮುಖ ಶ್ವಾನ (Dog Squad) ಗೌರಿ ಕೊನೆಯುಸಿರೆಳೆದಿದೆ. ಅನಾರೋಗ್ಯ ಹಿನ್ನೆಲೆ ಇವತ್ತು ಬೆಳಗ್ಗೆ ಗೌರಿ ಸಾವನ್ನಪ್ಪಿದೆ. ಸರ್ಕಾರಿ ಗೌರವದೊಂದಿಗೆ ಶ್ವಾನದ ಅಂತ್ಯಕ್ರಿಯೆ ನೆರವೇರಿಸಲಾಯಿತು.

Shivamogga-Live-Number-1-Website

Police-Dog-Squad-Gowri-Dies

ಶಿವಮೊಗ್ಗದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಗೌರಿ ಶ್ವಾನಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಗೌರಿಗೆ ಗೌರವ ಸಲ್ಲಿಸಿದರು.

ಇದನ್ನೂ ಓದಿ – ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

ಪೊಲೀಸ್‌ ಇಲಾಖೆಯ ಪ್ರಮುಖ ಶ್ವಾನ

ಜಿಲ್ಲಾ ಪೊಲೀಸ್‌ ಇಲಾಖೆಯ ಅಪರಾಧ ಪತ್ತೆ ದಳದಲ್ಲಿ ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಗೌರಿ ಪ್ರಮುಖ ಸ್ಥಾನ ಹೊಂದಿತ್ತು.

Gowri Police Dog Squad Dog

2012ರ ಆಗಸ್ಟ್‌ 3ರಂದು ಜನಿಸಿದ್ದ ಗೌರಿ, 2013ರ ಆಗಸ್ಟ್‌ 28ರಂದು ಪೊಲೀಸ್‌ ಇಲಾಖೆಗೆ ಸೇರ್ಪಡೆಯಾಗಿತ್ತು. ಆ ಬಳಿಕ 312 ಅಪರಾಧ ಪತ್ತೆ ಪ್ರಕರಣದಲ್ಲಿ ಭಾಗಿಯಾಗಿತ್ತು. ಈ ಪೈಕಿ 36 ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಸುಳಿವು ನೀಡಿತ್ತು. ಅಡಕೆ ಮತ್ತು ಮನೆ ಕಳ್ಳತನ ಪ್ರಕರಣದಲ್ಲಿ ಗೌರಿ ಸುಳಿವು ನೀಡಿತ್ತು. ಪೊಲೀಸ್‌ ಸಿಬ್ಬಂದಿ ಸಿ.ಲೋಕೇಶ್‌ ಅವರು ಗೌರಿಯ ನಿರ್ವಾಹಕರಾಗಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಜನ ಮನ ಗೆದ್ದಿದ್ದ ಗೌರಿ

ಶಿವಮೊಗ್ಗ ನಗರದಲ್ಲಿ ನಡೆಯುತ್ತಿದ್ದ ‍‍ಶ್ವಾನ (Dog Squad) ಪ್ರದರ್ಶನದಲ್ಲಿ ಗೌರಿ ಭಾಗವಹಿಸಿ, ಜನರ ಮನಸು ಗೆದ್ದಿತ್ತು. ಅಪರಾಧ ಪತ್ತೆ ಪ್ರಾತ್ಯಕ್ಷಿಕೆ ನೀಡಿ, ಎಲ್ಲರಿಂದಲು ಪ್ರಶಂಸೆ ಪಡೆದಿತ್ತು. ಅತ್ಯಂತ ಸ್ನೇಹ ಜೀವಿಯಾಗಿದ್ದ ಗೌರಿ, ತುಂಬಾ ತೀಕ್ಷ್ಣಮತಿಯಾಗಿತ್ತು. ಇದೇ ಕಾರಣಕ್ಕೆ ಪೊಲೀಸ್‌ ಇಲಾಖೆಯಲ್ಲಿ ಗೌರಿ ಎಲ್ಲರ ಅಚ್ಚುಮೆಚ್ಚಿನ ಶ್ವಾನವಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮೇ 10, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment