ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2023
SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್ಗಳನ್ನೂ ಕದ್ದೊಯ್ದಿದ್ದಾರೆ.

ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್ನಲ್ಲಿರುವ ಯುನೈಟೆಡ್ ಟ್ರೇಡಿಂಗ್ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್ ಪೆಟ್ಟಿಗೆಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕಳ್ಳರು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್ ಕೂಡ ಹೊತ್ತೊಯ್ದಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ವಿಚಾರ ತಿಳಿಯುತ್ತಿದ್ದಂತೆ ಸಾಗರ ನಗರ ಠಾಣೆಯ ಇನ್ಸ್ಪೆಕ್ಟರ್ ಸೀತಾರಾಮ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಶಿವಮೊಗ್ಗದಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ
ಸಂಸ್ಥೆಯ ಮುಖ್ಯಸ್ಥೆ ಅನುರಾಧಾ ಕಾಗೋಡು ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





