BREAKING NEWS | ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಜೋಡಿ ಕೊಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2023

THIRTHAHALLI : ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಜೋಡಿ ಕೊಲೆ ನಡೆದಿದೆ. ಕಳೆದ ರಾತ್ರಿ ಕೃತ್ಯ ಎಸಗಿರುವ ಶಂಕೆ ಇದೆ.

THIRTHAHALLI-BREAKING-NEWS

ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನದಲ್ಲಿ (Community Hall) ಘಟನೆ ಸಂಭವಿಸಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ ಕೂಲಿ ಕಾರ್ಮಿಕರು ಎಂದು ಶಂಕಿಸಲಾಗಿದೆ. ಮೃತರನ್ನು ದಾವಣಗೆರೆ ಮೂಲದ ಮಂಜಪ್ಪ ಮತ್ತು ಬೀರಪ್ಪ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ – ಲಾರಿ ಚಾಲಕನ ತಲೆಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ವಿಷಯ ತಿಳಿದು ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆರಳಚ್ಚು, ಶ್ವಾನದಳ ಬರುವ ಸಾಧ್ಯತೆ ಇದೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೆ ಗೊತ್ತಾಗಬೇಕಿದೆ. ಸದ್ಯದಲ್ಲೇ ಸಮುದಾಯ ಭವನ ಉದ್ಘಾಟನೆ ಆಗುವುದರಲ್ಲಿತ್ತು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2023

Leave a Comment