ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 MAY 2023
SHIMOGA : 108 ಆಂಬುಲೆನ್ಸ್ (Ambulance) ಡಿಕ್ಕಿಯಾಗಿ ಬೈಕ್ ಸವಾರರೊಬ್ಬರಿಗೆ ಗಂಭೀರ ಗಾಯವಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇದೆ ವೇಳೆ ಮಂಗಳೂರಿನಲ್ಲಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ಈ ಹಿನ್ನೆಲೆ ಅಪಘಾತದ ಕುರಿತು ತಡವಾಗಿ ದೂರು ದಾಖಲಾಗಿದೆ.

ಏನಿದು ಪ್ರಕರಣ?
ಸಂತೆ ಕಡೂರು ಗ್ರಾಮದ ರಾಂಪುರದ ಬಸವರಾಜಪ್ಪ ಎಂಬುವವರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಮೇ.14ರಂದು ಸಂಜೆ ಕೆಲಸ ಮುಗಿಸಿ ಪರಿಚಯದವರ ಬೈಕಿನಲ್ಲಿ ರಾಂಪುರ ಕ್ರಾಸ್ವರೆಗೆ ಬಂದಿದ್ದಾರೆ. ಅದೆ ಬೈಕಿನಲ್ಲಿ ಮನೆ ಕಡೆಗೆ ಹೋಗುವಾಗ ಶಿವಮೊಗ್ಗ ಕಡೆಯಿಂದ ಬಂದ 108 ಆಂಬುಲೆನ್ಸ್ (Ambulance) ಡಿಕ್ಕಿ ಹೊಡೆದಿದೆ. ಬಸವರಾಜಪ್ಪ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಡಿಕ್ಕಿ ಹೊಡೆದ ಆಂಬುಲೆನ್ಸ್ನಲ್ಲೇ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೈಟ್ ಖರೀದಿಸುವ ಮುನ್ನ ಹುಷಾರ್, ಯಾರದ್ದೋ ಸೈಟ್ ಮತ್ಯಾರಿಗೋ ಮಾರಲು ಯತ್ನ
ಆತ್ಮಹತ್ಯೆ ಮಾಡಿಕೊಂಡ ಮಗ
ಬಸವರಾಜಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚೇತರಿಸಿಕೊಳ್ಳುವ ಹೊತ್ತಿಗೆ ಬಸವರಾಜಪ್ಪ ಅವರ ಮಗ ರಾಜು ಮೇ.16ರಂದು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದರು. ಸದ್ಯ ಬಸವರಾಜಪ್ಪ ಅವರು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಬಸವರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ 108 ಆಂಬುಲೆನ್ಸ್ ಚಾಲಕನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















