ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 MAY 2023

SHIMOGA : ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್‌ಗಳು ಪುನಃ ಚರ್ಚೆಗೆ ಬಂದಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿದ್ದಂತೆ ಇಂದಿರಾ ಕ್ಯಾಂಟೀನ್‌ಗಳಿಗೆ (Indira Canteen) ಜೀವ ಕಳೆ ತುಂಬುವ ಭರವಸೆ ನೀಡಿದ್ದಾರೆ. ಶಿವಮೊಗ್ಗದಲ್ಲಿಯು ನಾಲ್ಕು ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿದೆ. ಯಾವ್ಯಾವ ಕ್ಯಾಂಟೀನ್‌ ಹೇಗಿದೆ? ಜನ ಬರುತ್ತಿದ್ದಾರೋ ಇಲ್ಲವೋ ಅನ್ನುವ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

Shimoga-Indira-Canteen-Vinobanagara-Shivalaya

2018ರಲ್ಲಿ ಮೊದಲ ಕ್ಯಾಂಟೀನ್‌

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೊಳಿಸಿದರು. ಕಡಿಮೆ ದರದಲ್ಲಿ ಗುಣಮಟ್ಟದ ತಿಂಡಿ, ಊಟ ಒದಗಿಸುವುದು ಈ ಯೋಜನೆಯ ಉದ್ದೇಶ. ಐದು ರುಪಾಯಿಗೆ ತಿಂಡಿ, ಹತ್ತು ರುಪಾಯಿಗೆ ಊಟ ಹಲವು ಜನರನ್ನು ಆಕರ್ಷಿಸಿತ್ತು. 2017ರ ಆಗಸ್ಟ್‌ 15ರಂದು ಇಂದಿರಾ ಕ್ಯಾಂಟೀನ್‌ಗೆ (Indira Canteen) ಚಾಲನೆ ನೀಡಲಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಇಂದಿರಾ ಕ್ಯಾಂಟೀನ್‌ ಆರಂಭವಾಗಿದ್ದು 2018ರ ಮಾರ್ಚ್‌ 13ರಂದು.

Indira Canteen Shivamogga Vinobanagara Inaugurated by Minister Kagodu Thimmappa

ಹೇಗಿತ್ತು ಮೊದಲ ಕ್ಯಾಂಟೀನ್‌?

ವಿನೋಬನಗರದ ಶಿವಾಲಯ ಸಮೀಪ ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಯಿತು. ಇಂದಿರಾ ಕ್ಯಾಂಟೀನ್‌ಗೆ ದೊಡ್ಡ ಸಂಖ್ಯೆಯ ಜನರು ಬರುತ್ತಿದ್ದರು. ಇದರ ಜನಪ್ರಿಯತೆ ಹೇಗಿತ್ತು ಅಂದರೆ ಕೆಲವೇ ನಿಮಿಷದಲ್ಲಿ ಟೋಕನ್‌ಗಳು ಖಾಲಿಯಾಗುತ್ತಿದ್ದವು. ಗುಣಮಟ್ಟದ ಆಹಾರ, ಉತ್ತಮ ವಾತಾವರಣ ಇದ್ದಿದ್ದರಿಂದ ಕಾರುಗಳಲ್ಲಿಯು ಜನ ಬಂದು ಇಲ್ಲಿ ಊಟ, ತಿಂಡಿ ಸವಿಯುತ್ತಿದ್ದರು. ಸರ್ಕಾರ ಬದಲಾದಂತೆ ಇಂದಿರಾ ಕ್ಯಾಂಟೀನ್‌ಗಳ ಸ್ಥಿತಿಯು ಬದಲಾಯಿತು.

Indira Canteen Shivamogga Vinobanagara

ಈಗ ಹೇಗಿದೆ ಮೊದಲ ಕ್ಯಾಂಟೀನ್‌ ಸ್ಥಿತಿ?

ಜಿಲ್ಲೆಯ ಮೊದಲ ಇಂದಿರಾ ಕ್ಯಾಂಟೀನ್‌ಗೆ ಈಗ ಬೆರಳೆಣಿಕೆಯಷ್ಟು ಜನ ಬರುತ್ತಿದ್ದಾರೆ. ಬೆಳಗ್ಗೆ ತಿಂಡಿಗೆ ಇಡ್ಲಿ, ರೈಸ್‌ ಬಾತ್‌ ಇರಲಿದೆ. ಭಾನುವಾರ ಉಪ್ಪಿಟ್ಟು, ಕೇಸರಿ ಬಾತ್‌ ಸಿಗಲಿದೆ. ಮಧ್ಯಾಹ್ನ ಊಟಕ್ಕೆ ರೊಟ್ಟಿ, ಅನ್ನ, ಸಾಂಬಾರ್‌, ಪಲ್ಯ ಇರಲಿದೆ. ರಾತ್ರಿಯು ಇದೆ ಮಾದರಿ ಊಟ ಸಿಗುತ್ತಿದೆ.

ಪ್ರತಿದಿನ ಬೆಳಗ್ಗೆ 7.30ರಿಂದ 10 ಗಂಟೆವರೆಗೆ ತಿಂಡಿಯ ಸಮಯ. 5 ರುಪಾಯಿಗೆ ತಿಂಡಿ ಲಭ್ಯ. ಮಧ್ಯಾಹ್ನ 12.30 ರಿಂದ 3 ಗಂಟೆವರೆಗೆ ಊಟ, ರಾತ್ರಿ 7 ರಿಂದ 9 ಗಂಟೆವರೆಗೆ ಊಟ ಸಿಗಲಿದೆ. ರೊಟ್ಟಿ ಊಟಕ್ಕೆ 20 ರೂ., ಅನ್ನ ಸಾಂಬಾರ್‌ಗಾದರೆ 10 ರೂ.

Indira Canteen Shivamogga Vinobanagara

ಪ್ರತಿ ದಿನ ಬೆಳಗ್ಗೆ ಸುಮಾರು 70 ಮಂದಿ ತಿಂಡಿಗೆ ಬರುತ್ತಾರೆ. ಮಧ್ಯಾಹ್ನ 60 ರಿಂದ 70 ಮಂದಿ ಊಟ ಮಾಡುತ್ತಾರೆ. ರಾತ್ರಿ ಹೆಚ್ಚೆಂದರೆ 20 ಮಂದಿ ಇಲ್ಲಿ ಊಟ ಮಾಡಿ ಹೋಗುತ್ತಾರೆ. ಮೊದಲೆಲ್ಲ ಟೋಕನ್‌ ವ್ಯವಸ್ಥೆ ಇತ್ತು. ಈಗ ಜನ ಕಡಿಮೆ ಆಗಿರುವುದರಿಂದ ಟೋಕನ್‌ ಇಲ್ಲ. ನೇರವಾಗಿ ಹಣ ಕೊಟ್ಟು, ಊಟ ಮಾಡಬೇಕಿದೆ.

ಪಾತ್ರೆಗಳು, ಕುಡಿಯುವ ನೀರು ಹಾಗೂ ಕ್ಯಾಂಟೀನ್‌ ಆವರಣದಲ್ಲಿ ಸ್ವಚ್ಛತೆ ಇದೆ. ಮೂರು ಮಹಿಳೆಯರು ಇಲ್ಲಿ ಪ್ರತ್ಯೇಕ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

Indira Canteen Shivamogga Bus Stand

ಜನರನ್ನು ಇನ್ನಷ್ಟು ಸೆಳೆಯಬೇಕಿದೆ

ಶಿವಮೊಗ್ಗ ನಗರದಲ್ಲಿ ನಾಲ್ಕು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿದೆ. ವಿನೋಬನಗರ ಶಿವಾಲಯ ಬಳಿ, ಆರ್‌ಎಂಸಿ ಒಳಾಂಗಣದಲ್ಲಿ, ಖಾಸಗಿ ಬಸ್‌ ನಿಲ್ದಾಣದ ಹಿಂಭಾಗ, ಮೀನಾಕ್ಷಿ ಭವನದಲ್ಲಿ ಡಿಡಿಪಿಐ ಕಚೇರಿ ಆವರಣದಲ್ಲಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಎಲ್ಲೆಡೆಯು ಬೆರಳೆಣಿಕೆಯಷ್ಟು ಮಂದಿ ಮಾತ್ರ ಊಟ, ತಿಂಡಿಗೆ ಬರುತ್ತಿದ್ದಾರೆ. ಸರ್ಕಾರ ಬದಲಾದಂತೆ ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಇರಲಿಲ್ಲ. ಇದೆ ಕಾರಣಕ್ಕೆ ಜನ ಇಂದಿರಾ ಕ್ಯಾಂಟೀನ್‌ಗಳಿಂದ ದೂರಾದರು. ಲಾಕ್‌ಡೌನ್‌ ಬಳಿಕ ಜನಪ್ರಿಯತೆ ಪೂರ್ಣ ಕುಸಿಯಿತು.

ಇದನ್ನೂ ಓದಿ – ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು ಮೇ 23ರಂದು ತುಮಕೂರಿನ ತನಕ ಮಾತ್ರ ಸಂಚರಿಸಲಿದೆ, ಇಲ್ಲಿದೆ ಕಾರಣ

ಕೆಲಸಗಾರರಿಗೆ ಸರಿಯಾದ ವೇತನವಿಲ್ಲ

ಶಿವಮೊಗ್ಗದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಪ್ರತಿದಿನ ಕೂಲಿ ಎಂದು 200 ರೂ. ನೀಡಲಾಗುತ್ತದೆ. ಉಳಿದಂತೆ ಇಎಸ್‌ಐ, ಪಿಎಫ್‌ ಸೇರಿ ಬೇರಾವುದೆ ಸವಲತ್ತು ಸಿಗುತ್ತಿಲ್ಲ. ಸಿದ್ದರಾಮಯ್ಯ ಅವರು ಪುನಃ ಮುಖ್ಯಮಂತ್ರಿ ಆಗಿರುವುದರಿಂದ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡುವುದರ ಜೊತೆಗೆ, ತಮ್ಮ ಬದುಕಿಗೂ ಆಸರೆಯಾಗಬಲ್ಲರು ಎಂಬ ನಂಬಿಕೆ ಇಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರದ್ದು.

ಶಿವಮೊಗ್ಗದ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ಕೊಡಬೇಕಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ವೇತನದ ಉದ್ಯೋಗದಲ್ಲಿರುವವರಿಗೆ ಹೊಟ್ಟೆ ತುಂಬ ಊಟ ಸಿಗಲು ಅನುಕೂಲವಾಗಲಿದೆ.

SHIVAMOGGA LIVE NITIN KAIDOTLU QUOTE jpg

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 21, 2023

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment