ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 27 MAY 2023
TUMARI : ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಪ್ಪಾನೆ ಲಾಂಚ್ (Muppane Launch) ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಂದರು ಮತ್ತು ಒಳನಾಡು ಜಾಲ ಸಾರಿಗೆ ಇಲಾಖೆ ನಿರ್ಧರಿಸಿದೆ. ಲಾಂಚ್ ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶುಕ್ರವಾರ ಆಗಿದ್ದೇನು?
ಶರಾವತಿ ಹಿನ್ನೀರು ಭಾಗದ ಹಲ್ಕೆ – ಮುಪ್ಪಾನೆ ಲಾಂಚ್ (Muppane Launch) ಸಂಚರಿಸುತ್ತದೆ. ಶುಕ್ರವಾರ ಲಾಂಚ್ಗೆ ಮರದ ದಿಮ್ಮಿಗಳು, ಮರಳಿನ ದಿಬ್ಬ ತಗುಲಿದೆ. ನೀರಿನ ಮಟ್ಟ ಕುಸತದಿಂದಾಗಿ ಈ ರೀತಿಯಾಗಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಈವರೆಗಿನ ವಾಡಿಕೆ ಮಳೆಯಾಗಿಲ್ಲ. ಮುಂಗಾರು ಬಿರುಸಾದರೆ ನೀರಿನ ಮಟ್ಟ ಹೆಚ್ಚಳವಾಗಲಿದೆ. ಆಗ ಲಾಂಚ್ ಪುನಾರಂಭ ಮಾಡಬಹುದು.
ಇದನ್ನೂ ಓದಿ – ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?
ಪ್ರಯಾಣಿಕರ ಸುರಕ್ಷತೆಗಾಗಿ ಸೇವೆ ಸ್ಥಗಿತ
ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾದರೆ ಮರದ ದಿಮ್ಮಿಗಳು, ಮರಳಿನ ದಿಬ್ಬಗಳು ಲಾಂಚ್ ಕೆಳ ಭಾಗಕ್ಕೆ ತಗುಲಲಿವೆ. ಇದರಿಂದ ಲಾಂಚ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಲಿದೆ. ಲಾಂಚ್ ಮತ್ತು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಕರೂರು ಹೋಬಳಿಯಿಂದ ಕಾರ್ಗಲ್, ಜೋಗಕ್ಕೆ ಸಮೀಪದ ದಾರಿ ಇದಾಗಿದೆ. ಲಾಂಚ್ ಸೇವೆ ಕುರಿತು ಅರಿವಿರುವ ಪ್ರವಾಸಿಗರು ಇದೆ ಮಾರ್ಗವಾಗಿ ಕಾರ್ಗಲ್, ಜೋಗಕ್ಕೆ ತಲುಪುತ್ತಾರೆ. ತುರ್ತು ಸಂದರ್ಭದಲ್ಲಿಯು ಈ ಲಾಂಚ್ ಸ್ಥಳೀಯರಿಗೆ ಅನುಕೂಲವಾಗಿತ್ತು.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






