ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 29 MAY 2023
SHIMOGA : ನಗರದ ವಿವಿಧೆಡೆ ಜೋರು ಗಾಳಿ, ಮಳೆಗೆ ಮರಗಳು ಬುಡಮೇಲಾಗಿವೆ. ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿವಿಧೆಡೆ ತೆರಳಿ ತೆರವು ಕಾರ್ಯಾಚರಣೆ (City Rounds) ಪರಿಶೀಲಿಸಿದರು. ಅಧಿಕಾರಿಗಳಿಗೆ ಕರೆ ಮಾಡಿ, ತುರ್ತು ನೆರವು ನೀಡುವಂತೆ ಸೂಚಿಸಿದರು.

ಸೋಮವಾರ ಸಂಜೆ ಗಾಳಿ, ಮಳೆಯಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ಮರಗಳು ಧರೆಗುರುಳಿದೆ. ವಾಹನಗಳಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬಿಗಳು ತುಂಡಾಗಿವೆ. ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿದರು. ಅಲ್ಲದೆ ತುರ್ತಾಗಿ ಮರಗಳ ತೆರವು ಮಾಡಿ, ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ – ಗಾಳಿ, ಮಳೆಗೆ ಹಾನಿಯಾಯ್ತು ಮನೆಯ ಶೀಟ್, ಹಾರಿ ಬಂದು ಹೈವೆ ರಸ್ತೆಯ ಸಿಸಿ ಕ್ಯಾಮರಾ ಕಂಬದಲ್ಲಿ ಜೋತಾಡ್ತಿದೆ ಫ್ಲೆಕ್ಸ್
ಇನ್ನು, ಬೊಮ್ಮನಕಟ್ಟೆಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು
ಮಹಾನಗರ ಪಾಲಿಕೆ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಈ ವೇಳೆ ಹಾಜರಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






