ಪಾರ್ಟ್‌ ಟೈಮ್‌ ಜಾಬ್‌, 200 ರೂ. ಹೂಡಿಕೆ ಮಾಡಿ 324 ರೂ. ಗಳಿಸಿ, ನಂಬಿದ ವ್ಯಕ್ತಿ ಕಥೆ ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 2 JUNE 2023

SHIMOGA : ಟೆಲಿಗ್ರಾಂನಲ್ಲಿ ಬಂದ ಪಾರ್ಟ್‌ ಟೈಮ್‌ ಜಾಬ್‌ (Part Time job) ಮಾಹಿತಿಯ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬ ಲಕ್ಷ ಲಕ್ಷ ರೂ. ಹಣ ಕಳದುಕೊಂಡಿದ್ದಾರೆ. ಹಣ ಹೂಡಿಕೆ ಮಾಡಿ, ಪ್ರಾಡೆಕ್ಟ್‌ ಪ್ರಮೋಷನ್‌ ಮಾಡಿ ಹಣ ಸಂಪಾದಿಸಬಹುದು ಎಂಬ ಆಮಿಷವೊಡ್ಡಿ, ವಂಚಿಸಲಾಗಿದೆ.

ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್

ಟೆಲಿಗ್ರಾಂ ಆ್ಯಪ್‌ನಲ್ಲಿ ಶಿಕಾರಿಪುರದ ವ್ಯಕ್ತಿಯೊಬ್ಬನಿಗೆ ಪಾರ್ಟ್‌ ಟೈಮ್‌ ಉದ್ಯೋಗದ (Part Time job) ಲಿಂಕ್‌ ಬಂದಿತ್ತು. ಇದನ್ನು ಕ್ಲಿಕ್‌ ಮಾಡಿದಾಗ ಉತ್ಪನ್ನಗಳ ಪ್ರಮೋಷನ್‌ ಮಾಡಬೇಕು ಎಂದು ಸೂಚಿಸಲಾಗಿತ್ತು. ಮೊದಲಿಗೆ 200 ರೂ. ಡೆಪಾಸಿಟ್‌ ಮಾಡುವಂತೆ ತಿಳಿಸಲಾಗಿತ್ತು. ಟಾಸ್ಕ್‌ ಪೂರೈಸುತ್ತಿದ್ದಂತೆ ಶಿಕಾರಿಪುರದ ವ್ಯಕ್ತಿಯ ಬ್ಯಾಂಕ್‌ ಖಾತೆಗೆ 324 ರೂ. ಹಣ ಬಂದಿತ್ತು. ನಂತರ 500 ರೂ. ಹೂಡಿಕೆ ಮಾಡಿದ್ದಕ್ಕೆ 546 ರೂ. ಮರಳಿ ಬಂದಿತ್ತು.

ಇದನ್ನೂ ಓದಿ – ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್‌ ರಿಕ್ವೆಸ್ಟ್‌, ಏರ್‌ಪೋರ್ಟ್‌ನಿಂದ ಫೋನ್‌, ಕೊನೆಗೆ ಕಾದಿತ್ತು ಶಾಕ್

ಮೇ 28ರಂದು ಟೆಲಿಗ್ರಾಂನಲ್ಲಿ ಮತ್ತೊಂದು ಲಿಂಕ್‌ ಬಂದಿತ್ತು. ಟಾಸ್ಕ್‌ ಪೂರೈಸುವಂತೆ ಸೂಚಿಸಲಾಗಿತ್ತು. ವಿವಿಧ ಹಂತದಲ್ಲಿ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರಿಂದ ಶಿಕಾರಿಪುರದ ಯುವಕ ತನ್ನ ಬ್ಯಾಂಕ್ ಖಾತೆಯಿಂದ 2.88 ಲಕ್ಷ ರೂ., ಅಣ್ಣನ‌ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ., ಹೆಂಡತಿಯ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ. ಹೂಡಿಕೆ ಮಾಡಿದ್ದಾನೆ. ಹಣ ಹಿಂತಿರುಗಿ ಬಾರದಿದ್ದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2023

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

Leave a Comment