ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಮೇಷ
ತುಂಬಾ ದಣಿದಿದ್ದೀರ. ವಿಶ್ರಾಂತಿ ಪಡೆಯಿರಿ. ಅನ್ಯರ ದೋಷ ಕಂಡು ಹಿಡಿಯಲು ಹೋಗಬೇಡಿ. ವಾದ, ಜಗಳಕ್ಕೆ ಮುಂದಾಗಬೇಡಿ. ನಿರೀಕ್ಷೆಯಂತೆ ಕೆಲಸಗಳು ಆಗದಿರುವುದರಿಂದ ಅಸಮಾಧಾನ.
ವೃಷಭ
ಆಹಾರದ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರಿಂದ ಉಡುಗೊರೆ ಲಭಿಸಲಿದೆ. ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ದುರಭ್ಯಾಸಗಳಿಂದ ದೂರವಿರಿ.

ಮಿಥುನ
ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕೆ ಕೈಗೊಂಡ ಪ್ರವಾಸದಿಂದ ಲಾಭವಾಗಲಿದೆ. ಯೋಗ, ಧ್ಯಾನದಿಂದ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತೀರಿ.
ಕರ್ಕಾಟಕ
ಕುಟುಂಬದೊಂದಿಗೆ ಸಮಯ ಕಳೆಯುವುದು ಉಚಿತ. ಒತ್ತಡ ನಿವಾರಣೆಯಾಗಲಿದೆ. ಸಂಗಾತಿಯೊಂದಿಗೆ ಮಾತುಕತೆ ನಡೆಸುವುದರಿಂದ ಸಮಾಧಾನ ಲಭಿಸಲಿದೆ.
ಸಿಂಹ
ಹಣವನ್ನು ಹೂಡಿಕೆ ಮಾಡಿ ಅಥವಾ ಸುರಕ್ಷಿತ ಸ್ಥಳದಲ್ಲಿರಿಸಿ. ಭವಿಷ್ಯದಲ್ಲಿ ಅನುಕೂಲವಾಗಲಿದೆ. ಹಠಾತ್ ಕೆಲಸದಿಂದಾಗಿ ಸಂಜೆ ವೇಳೆ ಕುಟುಂಬವನ್ನು ನಿರ್ಲಕ್ಷಿಸುತ್ತೀರಿ. ಇದರಿಂದ ಸಮಸ್ಯೆಗೆ ಸಿಲುಕುತ್ತೀರಿ.
ಕನ್ಯಾ
ಮನೆಗೆ ಸಂಬಂಧಿಸಿದ ಹೂಡಿಕೆಯಿಂದ ಲಾಭ. ಏಕಾಗ್ರತೆ ಸಾಧಿಸಿ. ಪಟ್ಟು ಬಿಡದೆ ಕೆಲಸ ಮುಂದುವರೆಸಿ. ಒಂಟಿಯಾಗಿ ಸಮಯ ಕಳೆಯಬೇಕು ಎಂದನಿಸಲಿದೆ.
ತುಲಾ
ತೊಂದರೆಯಲ್ಲಿರುವವರಿಗೆ ಸಹಾಯ ಮಾಡುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ಮುಖ್ಯಸ್ಥರ ಕೋಪಕ್ಕೆ ತುತ್ತಾಗುತ್ತೀರಿ. ಮನೆಯಲ್ಲಿ ಸಂಗಾತಿಯೊಂದಿಗೆ ಮುನಿಸು.
ವೃಶ್ಚಿಕ
ಹಣದ ಚಿಂತೆ ಮೂಡಲಿದೆ. ಸ್ನೇಹಿತರಿಂದ ಸಾಲ ಕೇಳಬೇಕಾದ ಪರಿಸ್ಥಿತಿ. ಯಾವುದೆ ಕೆಲಸಕ್ಕೆ ಇವತ್ತು ನಿಗದಿಗಿಂತಲೂ ಹೆಚ್ಚು ಪ್ರಯತ್ನ ಪಡಬೇಕಾಗುತ್ತದೆ. ಯಶಸ್ಸು ಸಿಗಲಿದೆ.
ಧನಸ್ಸು
ಅನಗತ್ಯ ಒತ್ತಡದಿಂದ ದೂರವಿರಲು ಪ್ರಯತ್ನಿಸಿ. ಭೂಮಿ ಖರೀದಿ ಮತ್ತು ಮಾರಾಟಕ್ಕೆ ಉತ್ತಮ ದಿನ. ಮಕ್ಕಳ ಪ್ರೀತಿ ಸಂಪಾದಿಸಿ. ಹೊಸ ಕೆಲಸ ಹುಡುಕಲು ಇದು ಸಕಾಲ.
ಮಕರ
ಆರ್ಥಿಕ ಲಾಭವಿದೆ. ಸ್ನೇಹಿತರು ಮತ್ತು ಅಪರಿಚಿತರ ಕುರಿತು ಎಚ್ಚರವಿರಲಿ. ಕೈಗೊಂಡ ಕಾರ್ಯಗಳು ನಿರೀಕ್ಷೆಯಂತೆ ನಿಮ್ಮ ಗುರಿ ತಲುಪುವುದಿಲ್ಲ. ಸಂಗಾತಿಯಿಂದ ನೆರವು
ಕುಂಭ
ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಉತ್ತಮವಾದ ದಿನ. ಸಂಬಂಧಿಕರು ಸಾಲ ಕೇಳಿ ಬರುತ್ತಾರೆ. ಕೊಡುವಾಗ ಎಚ್ಚರ ವಹಿಸಿ. ಪ್ರಯತ್ನಕ್ಕೆ ತಕ್ಕ ಫಲ ದೊರೆಯಲಿದೆ.
ಮೀನ
ಸ್ನೇಹಿತರೊಂದಿಗೆ ಸುತ್ತಾಟ. ಹಣದ ಖರ್ಚಿನ ಮೇಲೆ ನಿಗಾ ಇರಲಿ. ಸಂಬಂಧಿಕರು ಮನೆಗೆ ಬರುವ ಸಾಧ್ಯತೆ. ಯೋಜನೆಗಳು ತಲೆಕೆಳಗಾಗಬಹುದು ಎಚ್ಚರ.
ಸೂರ್ಯ ದೇವರಿಗೆ 41 ದಿನ ಒಂದು ಚಮಚ ಸಾಸಿವೆಯನ್ನು ಅರ್ಪಿಸಿಬೇಕು. ಭಾನುವಾರ ಸೂರ್ಯನಿಗೆ ಆರ್ಘ್ಯ ನೀಡಬೇಕು. ಬಾಯಾರಿದ ಜನರಿಗೆ ಕುಡಿಯಲು ನೀರು ವಿತರಣೆ ಮಾಡಬೇಕು. ಇದರಿಂದ ಉದ್ಯೋಗ ಸಂಬಂಧ ಸಮಸ್ಯೆಗಳು ಪರಿಹಾರವಾಗಲಿದೆ.
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು

ಮೇಷ
ವೃಷಭ
ಮಿಥುನ
ಕರ್ಕಾಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನಸ್ಸು
ಮಕರ
ಕುಂಭ
ಮೀನ













