ಆಗುಂಬೆ ಘಾಟಿಯಲ್ಲಿ ಅಪಘಾತ, ರಸ್ತೆಯಲ್ಲಿ ಹರಿದ ನೆತ್ತರು, ಯುವಕ ಸಾವು, ಯುವತಿ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 18 JUNE 2023

AGUMBE : ಬೈಕ್‌ ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಗುಂಬೆ ಘಾಟಿಯಲ್ಲಿ (Agumbe Ghat) ಘಟನೆ ಸಂಭವಿಸಿದೆ.

Head-on-between-bus-and-KTM-Bike-in-Agumbe-ghat

ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್‌ ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.

ಹೇಗಾಯ್ತು ಅಪಘಾತ?

ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಶಶಾಂಕ್‌ ಮತ್ತು ನಿರ್ಮಿತಾ ಕೆಟಿಎಂ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ (Agumbe Ghat) 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ತುಂಗಾ ನದಿಗೆ ಇಳಿದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆ

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment